Advertisement

ಸದ್ಯ ಬಂಧಿಸಲ್ಲ, ಬಿಎಸ್ ವೈಗೆ ಎಸಿಬಿಯಿಂದ ತಾತ್ಕಾಲಿಕ ರಿಲೀಫ್

12:57 PM Aug 23, 2017 | Team Udayavani |

ಬೆಂಗಳೂರು: ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಎಸಿಬಿಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

Advertisement

ಪ್ರಕರಣದ ಕುರಿತಂತೆ ಬಿಎಸ್ ಯಡಿಯೂರಪ್ಪಗೆ ನೀಡಿದ್ದ ನೋಟಿಸ್ ಅನ್ನು ಹಿಂಪಡೆದ ಎಸಿಬಿ ಅಧಿಕಾರಿಗಳು, ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಮತ್ತು ಬಂಧಿಸುವುದಿಲ್ಲ ಎಂದು ಎಸಿಬಿ ಪರ ವಕೀಲರು ಬುಧವಾರ ಹೈಕೋರ್ಟ್ ಗೆ ಭರವಸೆ ನೀಡಿದ್ದಾರೆ. 

ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎರಡು ಪ್ರತ್ಯೇಕ ಎಫ್ ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next