Advertisement

ಅಪಘಾತ ಪ್ರಕರಣದ ತೀರ್ಪು: ಬಸ್‌ ಚಾಲಕನಿಗೆ 6 ತಿಂಗಳ ಸಾದಾ ಶಿಕ್ಷೆ

12:57 AM Feb 16, 2023 | Team Udayavani |

ಮಂಗಳೂರು: ಕೂಳೂರು ಬಳಿ ನಡೆದ ಅಪಘಾತದಲ್ಲಿ ಬೈಕ್‌ ಸವಾರನ ಸಾವಿಗೆ ಕಾರಣನಾದ ಬಸ್‌ ಚಾಲಕ ಎ. ಸೀತಾರಾಮ ಅವರಿಗೆ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ 6 ತಿಂಗಳ ಸಾದಾ ಶಿಕ್ಷೆ ಮತ್ತು 6000 ರೂ. ದಂಡ ವಿಧಿಸಿ ಆದೇಶ ನೀಡಿದ್ದು ತಪ್ಪಿದಲ್ಲಿ 3 ತಿಂಗಳು 10 ದಿನಗಳ ಕಾಲ ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖೀಸಿದೆ.

Advertisement

ರಾ. ಹೆ. 66ರ ಕೂಳೂರು ಸೇತುವೆ ಬಳಿ 2020ರ ಡಿ.4ರಂದು ಈ ಘಟನೆ ನಡೆದಿತ್ತು. ನ್ಯಾಯಾಧೀಶೆ ಅಂಜಲಿ ಶರ್ಮಾ ಅವರು ಸಾಕ್ಷಿ ವಿಚಾರಣೆ ನಡೆಸಿದ್ದರು. ಸರಕಾರದ ಪರವಾಗಿ ಸಹಾಯಕ ಅಭಿಯೋಜಕರಾದ ಗೀತಾ ರೈ ವಾದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next