Advertisement

ಮಹಿಳೆ ಮೇಲಿನ ಅನ್ಯಾಯಕ್ಕೆ ನ್ಯಾಯಾಲಯ ಮೂಕ ಪ್ರೇಕ್ಷಕ ಆಗಬಾರದು: ಹೈಕೋರ್ಟ್‌

11:13 PM Sep 12, 2020 | mahesh |

ಬೆಂಗಳೂರು: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಕಂಡು ನ್ಯಾಯಾಲಯಗಳು ಮೂಕ ಪ್ರೇಕ್ಷಕನಂತೆ ವರ್ತಿಸಬಾರದು. ಮಹಿಳೆಯ ರಕ್ಷಣೆ ಮತ್ತು ಗೌರವ ಕಾಪಾಡಲು ನ್ಯಾಯಾಲಯಗಳು, ಮಹಾ ಭಾರತದ ಕೃಷ್ಣನಂತೆ ನಡೆದುಕೊಳ್ಳಬೇಕು – ಇದು ಅತ್ಯಾ ಚಾರ ಆರೋಪ ಪ್ರಕರಣವೊಂದರ ವಿಚಾರಣೆ ಸಂದರ್ಭ ಹೈಕೋರ್ಟ್‌ ವ್ಯಕ್ತಪಡಿಸಿದ ಅಭಿಪ್ರಾಯ.

Advertisement

ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತನಗೆ ವಿಚಾರಣ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ನಾಗೇಶ್‌ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ| ಬಿ. ವೀರಪ್ಪ ಹಾಗೂ ನ್ಯಾ| ಇ.ಎಸ್‌. ಇಂದಿರೇಶ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನಾಗೇಶ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಜೀವಾವಧಿ ಶಿಕ್ಷೆಯನ್ನು ಖಾಯಂಗೊಳಿಸಿ ನ್ಯಾಯಪೀಠ ಆದೇಶಿಸಿದೆ. ನಾಗೇಶನು 2013ರಲ್ಲಿ ಮಂಗಳೂರಿನಲ್ಲಿ 69 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದ.

ದ.ಕ. ನ್ಯಾಯಾಲಯಕ್ಕೆ ಶ್ಲಾಘನೆ
ಜತೆಗೆ ಅತ್ಯಾಚಾರಿಗಳಿಗೆ ಕಠಿನ ಶಿಕ್ಷೆ ವಿಧಿಸಲು ಕೋರ್ಟ್‌ಗಳು ಹಿಂಜರಿಯಬಾರದು ಎಂದು ಜೀವಾವಧಿ ಶಿಕ್ಷೆ ವಿಧಿಸುತ್ತಾ ಅಭಿಪ್ರಾಯಪಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್‌ ಶ್ಲಾಘಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next