Advertisement

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಿ: ಎಚ್ ಡಿಕೆ ಆಗ್ರಹ

05:37 PM Jun 27, 2020 | keerthan |

ಬೆಂಗಳೂರು: ರಾಜ್ಯದ ದೃಶ್ಯ ಮತ್ತು ಮುದ್ರಣದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್-19 ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೋವಿಡ್-19 ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದಿದ್ದಾರೆ.

ಕೋವಿಡ್-19 ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next