Advertisement

ಅಗ್ನಿಶಾಮಕ ಸಿಬ್ಬಂದಿಗಳನ್ನು ಬೆಂಬಿಡದೆ ಕಾಡುತ್ತಿದೆ ಕೋವಿಡ್ ಸೋಂಕು !

09:39 PM Jul 09, 2020 | sudhir |

ಬೆಂಗಳೂರು: ಕೋವಿಡ್ ವಾರಿಯರ್‌ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕೂಡ ಕೋವಿಡ್ ಬೆಂಬಿಡದೆ ಕಾಡುತ್ತಿದೆ.

Advertisement

ಪೀಣ್ಯ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಗುರುವಾರ ಕೋವಿಡ್ ಸೋಂಕು ಧೃಡಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲೇ ಕೋವಿಡ್ ಸೋಂಕಿಗೆ ತುತ್ತಾದ ಸಿಬ್ಬಂದಿಯ ಸಂಖ್ಯೆ 42ಕ್ಕೆ ಏರಿದೆ.

ಪೀಣ್ಯ ಅಗ್ನಿಶಾಮಕ ಠಾಣೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾದ ಸಿಬ್ಬಂದಿಯನ್ನು ಕ್ವಾರಂಟೈನ್‌ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಗೂ ಕ್ವಾರಂಟೈನ್‌ ಮಾಡಲಾಗಿದ್ದು, ಇಡೀ ಠಾಣೆ ಸ್ಯಾನಿಟೈಸ್‌ ಮಾಡಲಾಗಿದೆ.

ಬುಧವಾರ ಎಂ.ಎಸ್‌ ಬಿಲ್ಡಿಂಗ್‌ ನಲ್ಲಿರುವ ಠಾಣೆ ಹಾಗೂ ಹೆಬ್ಟಾಳ ಠಾಣೆಯಲ್ಲಿನ ಸಿಬ್ಬಂದಿಯೊಬ್ಬರಿಗೆ ಸೋಂಕು ಧೃಡಪಟ್ಟಿತ್ತು.ಹೀಗಾಗಿ ಅವರನ್ನು ಕ್ವಾರಂಟೈನ್‌ ಮಾಡಿದ್ದು, ಠಾಣೆಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದರು.

ಎಸಿಬಿ ಡಿವೈಎಸ್ಪಿಗೆ ಸೋಂಕು!
ಮತ್ತೂಂದೆಡೆ ಖನಿಜ ಭವನದಲ್ಲಿರುವ ಎಸಿಬಿಯ ಡಿವೈಎಸ್ಪಿಯೊಬ್ಬರಿಗೂ ಕೋವಿಡ್ ಸೋಂಕು ಧೃಡಪಟ್ಟಿದೆ. ಎಸಿಬಿಯಲ್ಲಿ ಇದು ಎರಡನೇ ಕೋವಿಡ್ ಸೋಂಕು ಪ್ರಕರಣವಾಗಿದೆ.

Advertisement

ಸೋಂಕು ಧೃಡಪಟ್ಟ ಡಿವೈಎಸ್ಪಿ ಕಚೇರಿಯನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕಲಾಸಿಪಾಳ್ಯ ಠಾಣೆಗೆ ಕಮಿಷನರ್‌ ಭೇಟಿ!
ನಗರದ ಠಾಣೆಗಳ ಪೈಕಿ ಅತಿ ಹೆಚ್ಚು ಸಿಬ್ಬಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಸೀಲ್‌ ಡೌನ್‌ ಆಗಿದ್ದ ಕಲಾಸಿ ಪಾಳ್ಯ ಠಾಣೆ ಪುನ: ಕಾರ್ಯಾರಂಭ ಮಾಡಿದೆ.

ಈ ಹಿನ್ನೆಲೆಯಲ್ಲಿ ಗುರುವಾರ ಠಾಣೆಗೆ ಭೇಟಿ ನೀಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ , ಸಿಬ್ಬಂದಿಯ ಯೋಗ ಕ್ಷೇಮ ವಿಚಾರಿಸಿದರು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ.ಪೊಲೀಸ್‌ ಇಲಾಖೆ ಹಾಗೂ ಸರ್ಕಾರ ನಿಮ್ಮ ಬೆನ್ನಿಗಿದೆ ಎಂದು ಧೈರ್ಯ ತುಂಬಿ ಚಿಕಿತ್ಸೆ ಪಡೆದು ಗುಣಮುಖರಾದ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದರು.

Advertisement

Udayavani is now on Telegram. Click here to join our channel and stay updated with the latest news.

Next