Advertisement

ಕೋವಿಡ್‌ 19 ಸಂತ್ರಸ್ತರ ಹಕ್ಕುಗಳ ರಕ್ಷಣೆಗೆ ಆಯೋಗ ಮುಂದಾಗಲಿ

07:04 AM Jul 11, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19ದಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಸೋಂಕಿತ ಮೃತರನ್ನು ಅಮಾನವೀಯವಾಗಿ ಸಂಸ್ಕಾರ ಮಾಡುತ್ತಿರುವು ದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ  ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟ ವ್ಯವಸ್ಥೆಯಿಂದಾಗಿ ಕೋವಿಡ್‌ 19 ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್‌ 19 ಕೇರ್‌ ಸೆಂಟರ್‌ಗಳು ಹಾಗೂ ಸೂಕ್ತ ಆ್ಯಂಬುಲೆನ್ಸ್‌  ಸೇವೆ ದೊರೆಯದೇ ಸೋಂಕಿತರು ಪ್ರಾಣ ಕಳೆದುಕೊಳ್ಳುವಂತಾಗಿದೆ.

Advertisement

ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲ ಎನ್ನುವ ಕಾರಣಕ್ಕೆ ಸೋಂಕಿ ತರು ಆಸ್ಪತ್ರೆಗಳಿಗೆ ತಿರುಗಾಡಿ ರಸ್ತೆಗಳಲ್ಲಿಯೇ ಜೀವ ಕಳೆದುಕೊಳ್ಳುವಂತಾಗಿದೆ. ಪ್ರತಿಯೊಬ್ಬ ವ್ಯಕ್ತಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಮೃತರಾದ ಮೇಲೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವುದು ಮಾನವ ಹಕ್ಕುಗಳಾಗಿವೆ. ಆದರೆ, ಕೋವಿಡ್‌ 19 ಸಂದರ್ಭದಲ್ಲಿ ರಾಜ್ಯದಲ್ಲಿ ಮಾನವ ಹಕ್ಕುಗಳು ನಿರಂತರವಾಗಿ  ಉಲ್ಲಂಘನೆಯಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next