Advertisement

ಕೋವಿಡ್-19 ಆತಂಕದ ನಡುವೆಯೇ ದ.ಕ. ಡಿಸಿ ವರ್ಗಾವಣೆ ಪ್ರಯತ್ನ !

01:24 AM May 19, 2020 | Sriram |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೋವಿಡ್-19 ಮಹಾಮಾರಿ ವ್ಯಾಪಕ ವಾಗಿ ಹರಡುತ್ತಿರುವ ನಡುವೆಯೇ ದಿಢೀರಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯು ತ್ತಿರುವುದು ಗೊತ್ತಾಗಿದೆ.

Advertisement

ಮೂಲಗಳ ಪ್ರಕಾರ, ಜಿಲ್ಲಾಡಳಿತದಲ್ಲಿ ಆಡಳಿತಾತ್ಮಕ ಬದಲಾವಣೆ ತರುವುದಕ್ಕೆ ಕೆಲವು ಪ್ರಭಾವಿ ರಾಜಕೀಯ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವರ್ಗಾವಣೆ ಯತ್ನ ನಡೆಯುತ್ತಿರು ವುದು ನಿಜ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ ಸಾಮಾಜಿಕ ಜಾಲ ತಾಣದಲ್ಲಿ ಜಿಲ್ಲಾಧಿಕಾರಿ ಹಾಗೂಅಪರ ಜಿಲ್ಲಾಧಿಕಾರಿಗಳ ವರ್ಗಾ ವಣೆ ಬಹುತೇಕ ಖಚಿತ ಎಂಬ ವಿಚಾರವು ಸೋಮವಾರ ಬೆಳಗ್ಗಿನಿಂದ ಹರಿದಾಡುತ್ತಿತ್ತು. ಜಿಲ್ಲೆಯಲ್ಲಿ ಸೋಂಕು ಮೂಲ ಪತ್ತೆ ವಿಳಂಬಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಈಗಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಎಲ್ಲ ಬೆಳವಣಿಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಕಟ್ಟು-ನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ. ಈ ಹಂತದಲ್ಲಿ ಜಿಲ್ಲಾಧಿ ಕಾರಿಯನ್ನು ವರ್ಗಾವಣೆ ಮಾಡಿದರೆ ಅದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆ ಹಾಗೂ ಅನುಮಾನಕ್ಕೆ ಎಡೆ ಮಾಡುವ ಸಾಧ್ಯತೆಯಿದೆ.

 

Advertisement

Udayavani is now on Telegram. Click here to join our channel and stay updated with the latest news.

Next