Advertisement

ಉಡುಪಿಯಲ್ಲಿ ಕೋವಿಡ್‌ 19 ಸೋಂಕಿಗೆ ಮೊದಲ ಬಲಿ

07:30 AM May 17, 2020 | Lakshmi GovindaRaj |

ಉಡುಪಿ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ಮೇ 14ರಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಅವರಿಗೆ ಕೋವಿಡ್‌ 19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಮುಂಬಯಿಯಿಂದ ಬಂದ  ಕುಂದಾಪುರ ತಾಲೂಕು ಮೂಲದ 54 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕುಂದಾಪುರದಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಮೇ 13ರಂದು ಅವರಿಗೆ ಹೃದಯಾಘಾತವಾದಾಗ ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು.

Advertisement

ಬಳಿಕ  ಆರೋಗ್ಯ ಸ್ಥಿತಿ ಗಂಭೀರ ಇದ್ದ ಕಾರಣ ಸುಧಾರಿತ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರಲಾಯಿತು. ಅವರಿಗೆ ಉಸಿರಾಟದ ಸಮಸ್ಯೆ ಇದ್ದ ಕಾರಣ ಪ್ರತ್ಯೇಕವಾಗಿ ಐಸೊಲೇಶನ್‌ ವಾರ್ಡ್‌ಗೆ ದಾಖಲಿಸಲಾಗಿತ್ತು. ಅವರಿಗೆ ಶಸ್ತ್ರ  ಚಿಕಿತ್ಸೆ ಮಾಡಿದ ಬಳಿಕ ಅವರು ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಅವರು ಮುಂಬಯಿಂದ ಬಂದ ಕಾರಣ ಕೋವಿಡ್‌ 19 ಸೋಂಕು ಇದೆಯೇ ಎಂದು ಪರೀಕ್ಷಿಸಲು ನಿರ್ಧರಿಸಿದೆವು. ಇದೀಗ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next