Advertisement

ಹತೋಟಿಗೆ ಬರುತ್ತಿಲ್ಲ ಸೋಂಕು: 18 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುವ ಅನಿವಾರ್ಯತೆ

09:09 AM Apr 09, 2020 | keerthan |

ಮೈಸೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹತೋಟಿಗೆ ಬರುತ್ತಿಲ್ಲ. ಹೀಗಾಗಿ ರಾಜ್ಯದ ಸುಮಾರು 18 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಬಿ ಶ್ರೀ ರಾಮುಲು ಹೇಳಿದರು.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸೋಂಕು ಹತೋಟಿಗೆ ಬರುತ್ತಿಲ್ಲ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತರ ಸ್ಥಿತಿ ಆತಂಕ ಉಂಟು ಮಾಡುತ್ತಿದೆ. ಲಾಕ್ ಡೌನ್ ಮುಂದುವರೆಯುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳ ಜೊತೆ ನಾಳಿನ ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸುತ್ತೇವೆ ಎಂದರು.

ಮೈಸೂರು ಜಿಲ್ಲೆಯನ್ನು ಕೋವಿಡ್-19 ರೆಡ್ ಜೋನ್ ಎಂದು ಘೋಷಿಸಲಾಗಿದೆ. ಸೋಂಕು ಹರಡಿದ ಜ್ಯುಬಿಲಿಯಂಟ್ ಕಾರ್ಖಾನೆ ಬಗ್ಗೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ನೋಟೀಸ್ ನೀಡಲಾಗಿದೆ. ವೈರಸ್ ಸಂಪೂರ್ಣ ಹತೋಟಿಗೆ ಬರುವವರೆಗೆ ಕಾರ್ಖಾನೆ ಸ್ಥಗಿತಕ್ಕೆ ಆದೇಶಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next