Advertisement

ರಾಜ್ಯದಲ್ಲಿ ಹೊಸ ಎಂಟು ಸೋಂಕಿತ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ

08:08 AM Apr 28, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಹೊಸ ಎಂಟು ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ.

Advertisement

ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಎರಡು ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ತಲಾ ಒಂದು ಪ್ರಕರಣ ಖಚಿತವಾಗಿದೆ.

ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ ಮುಂಬೈ ಪ್ರಯಾಣದ ಇತಿಹಾಸ ಹೊಂದಿದ್ದು, ಸೋಂಕು ದೃಢವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 13 ವರ್ಷದ ಬಾಲಕನಿಗೆ ಸೋಂಕು ದೃಢವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಸೋಂಕು ಪ್ರಕರಣಗಳು ಖಚಿತವಾಗಿದ್ದು, ಸೋಂಕಿತ ಸಂಖ್ಯೆ 432ರ ಸಂಪರ್ಕದಿಂದ 80 ವರ್ಷದ ಮಹಿಳೆ ಮತ್ತು 45 ವರ್ಷದ ಪುರುಷನಿಗೆ ಸೋಂಕು ತಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸೋಂಕಿತ ಸಂಖ್ಯೆ 456ರ ಸಂಪರ್ಕದಿಂದ ಇಬ್ಬರು ಮಹಿಳೆಯರಿಗೆ ಸೋಂಕು ದೃಢವಾಗಿದೆ.

Advertisement

ವಿಜಯಪುರದಲ್ಲಿ ಇಬ್ಬರಿಗೆ ಸೋಂಕು ತಾಗಿರುವುದು ದೃಢವಾಗಿದ್ದು, 221 ಸಂಖ್ಯೆ ಸೋಂಕಿತನಿಂದ 45 ವರ್ಷದ ಪುರುಷನಿಗೆ ಸೋಂಕು ತಾಗಿದ್ದರೆ, 27 ವರ್ಷದ ವ್ಯಕ್ತಿಯ ಸೋಂಕು ಮೂಲ ಪತ್ತೆ ಮಾಡಲಾಗುತ್ತಿದೆ.

ಓರ್ವ ಸಾವು

ಸೋಂಕಿತ ಸಂಖ್ಯೆ 466- 50 ವರ್ಷದ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಇಂದು ಸಾವನ್ನಪ್ಪಿದ್ದು ಸಾವಿಗೆ ಕೋವಿಡ್-19 ಅಲ್ಲದ ಅನ್ಯ ಕಾರಣ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next