Advertisement

ಮಂಗಳೂರಿನಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ: ರಾಜ್ಯದಲ್ಲಿಂದು ಒಂದೇ ಪ್ರಕರಣ ದೃಢ

08:28 AM Apr 27, 2020 | keerthan |

ಬೆಂಗಳೂರು: ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆ 500 ಮುಟ್ಟಿದ್ದ ಕಾರಣ ಆತಂಕದಲ್ಲಿದ್ದ ಜನತೆಗೆ ಇಂದು ಒಂದು ಸಮಾಧಾನದ ಸುದ್ದಿ. ಯಾಕೆಂದರೆ ಶನಿವಾರ ಸಂಜೆಯಿಂದ ಇದುವರೆಗೆ ರಾಜ್ಯದಲ್ಲಿ ಕೇವಲ ಒಂದು ಸೋಂಕು ಪ್ರಕರಣ ಪತ್ತೆಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರಿನಲ್ಲಿ ಒಂದು ಪ್ರಕರಣ ದೃಢವಾಗಿದೆ. 47 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 432ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ಖಚಿತವಾಗಿದೆ. ಈಕೆಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 501 ಆಗಿದೆ. ಇದರಲ್ಲಿ 18 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು 177 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next