Advertisement

ಬೆಳ್ಮಣ್ ಪೆರಲ್ಪಾದೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ

01:57 PM Jun 01, 2020 | keerthan |

ಬೆಳ್ಮಣ್: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ.

Advertisement

ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ ಬಂದಿದ್ದ ಇತರರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿನ ಸಂಖ್ಯೆ ಏರುತ್ತಲೇ ಇದೆ. ರವಿವಾರ ಜಿಲ್ಲೆಯಲ್ಲಿ ಹತ್ತು ಹೊಸ ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next