Advertisement

ಪ್ರವಾಸದ ಇತಿಹಾಸ ಇಲ್ಲದ ವ್ಯಕ್ತಿಗೆ ಸೋಂಕು ದೃಢ: ಚಿಕ್ಕಬಳ್ಳಾಪುರ ಜನತೆಯಲ್ಲಿ ಆತಂಕ

02:25 PM Apr 14, 2020 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇದುವರೆಗೂ ದೆಹಲಿ, ಮೆಕ್ಕಾ ಮತ್ತಿತರ ಹೊರ ದೇಶಗಳಿಂದ ಬಂದವರಲ್ಲಿ ಮಾತ್ರ ಕೋವಿಡ್-19 ಸೋಂಕು ಪತ್ತೆಯಾಗಿದ್ದು ಒಂದಡೆಯಾದರೆ ಮಂಗಳವಾರ ಯಾವುದೇ ಪ್ರವಾಸದ ಇತಿಹಾಸ ಇಲ್ಲದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ತೀವ್ರ ಆತಂಕವನ್ನು ಉಂಟು ಮಾಡಿದೆ.

Advertisement

ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ 17ನೇ ವಾರ್ಡ 65 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19‌ ಸೋಂಕು ಇರುವುದು ‌ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಸಾಕಷ್ಟು ಮಂದಿದ್ದು ಆರೋಗ್ಯ ಇಲಾಖೆ ಅವರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.

ಇದುವರೆಗೂ ಕೇವಲ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಮಾತ್ರ 12 ಮಂದಿ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದರು. ಇದೀಗ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೂ ಕೋವಿಡ್-19 ಸೋಂಕು ವಿಸ್ತರಣೆ ಆಗಿರುವುದು ಜನರಲ್ಲಿ ಆತಂಕ ತಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next