Advertisement

ಮಣಿಪಾಲ ಕೆ.ಎಂ.ಸಿ.ಯಲ್ಲಿ ಮಾರ್ಚ್ 23ರಿಂದ ಎಮರ್ಜೆನ್ಸಿ ಚಿಕಿತ್ಸೆ ಮಾತ್ರ ಲಭ್ಯ

10:05 AM Mar 21, 2020 | Hari Prasad |

ಮಣಿಪಾಲ: ಕೋವಿಡ್ 19 ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇದೇ ಮಾರ್ಚ್ 23ರ ಸೋಮವಾರದಿಂದ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ವಿಭಾಗದಲ್ಲಿ ಮಾತ್ರವೇ ಚಿಕಿತ್ಸೆ ಲಭ್ಯವಿರಲಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತೀರ್ಮಾನಿಸಿದೆ.

Advertisement

ಸೋಮವಾರದಿಂದ ಮಣಿಪಾಲದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಗೆ ಬರುವ ಪ್ರತೀಯೊಬ್ಬರನ್ನು ಹೊರಭಾಗದಲ್ಲಿ ಹಾಕಲಾಗಿರುವ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ತಪಾಸಣೆಗೊಳಪಡಿಸಲಾಗುವುದು. ಮತ್ತು ಈ ತಪಾಸಣೆಯ ಸಂದರ್ಭದಲ್ಲಿ ಮುಂದಿನ ಚಿಕಿತ್ಸೆ ಅವಶ್ಯವಿದೆ ಎಂದು ಕಂಡುಬಂದಲ್ಲಿ ಅಂತಹ ರೋಗಿಗಳಿಗೆ ನಿರ್ಧಿಷ್ಟ ವಿಭಾಗದ ವ್ಯೆದ್ಯರಿಂದ ಚಿಕಿತ್ಸೆಗೆ ಅವಕಾಶ ನೀಡಲಾಗುವುದು. ಅತ್ಯವಶ್ಯ ಚಿಕಿತ್ಸೆಯ ಅಗತ್ಯ ಇರದೆ ಇರುವ ರೋಗಿಗಳನ್ನು, ಮುಂಬರುವ ದಿನಗಳಲ್ಲಿ ಆಸ್ಪತ್ರೆಗೆ ಬರುವಂತೆ ಸೂಚಿಸಿ ವಾಪಾಸು ಕಳುಹಿಸಲಾಗುವುದು ಎಂದು ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀವ್ರ ನಿಗಾ ಘಟಕಗಳಿಗೆ (ಐಸಿಯು) ಪ್ರವೇಶ ಮತ್ತು ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶದ ನಿರ್ಬಂಧ ಮುಂದುವರಿಯಲಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next