Advertisement

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ &ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

09:08 AM Apr 10, 2020 | Nagendra Trasi |

ನವದೆಹಲಿ:ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ 19 ವೈರಸ್ ಮಣಿಸಲು ಲಸಿಕೆ, ಔಷಧ ಅಥವಾ ಥೆರಪಿಗಿಂತ ಸಾಮಾಜಿಕ ಅಂತರ ಹಾಗೂ ಲಾಕ್ ಡೌನ್ ಸಮರ್ಥ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

ಜನರು ಸರ್ಕಾರ ಸೂಚಿಸಿರುವ ಐಸೋಲೇಶನ್ ಕ್ರಮ ಮತ್ತು ನಿಯಮಾವಳಿಯನ್ನು ಕರಾರುವಕ್ಕಾಗಿ ಅನುಸರಿಸಬೇಕಾಗಿದೆ. ಕೋವಿಡ್ 19 ಅಂಕಿಅಂಶಕ್ಕೆ ಸಂಬಂಧಿಸಿದಂತೆ ಬೇರೆ ಎಲ್ಲಾ ದೇಶಗಳಿಗೆ ಹೋಲಿಸಿದರೆ ಭಾರತ ಹೆಚ್ಚು ಸುರಕ್ಷತೆ ಸ್ಥಿತಿಯಲ್ಲಿದೆ ಎಂಬ ವಿಶ್ವಾಸ ನನ್ನದಾಗಿದೆ ಎಂದು ಬೆನ್ನೆಟ್ ಯೂನಿರ್ವಸಿಟಿ ಆಯೋಜಿಸಿದ್ದ ಕೋವಿಡ್ 19 ಗ್ಲೋಬಲ್ ಆನ್ ಲೈನ್ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣ 4/5 ದಿನಗಳಿಗೊಮ್ಮೆ ಹೆಚ್ಚಳವಾಗುತ್ತಿದೆ. ಆದರೂ ಬಹುತೇಕ ಜಿಲ್ಲೆಗಳಿಗೆ ವೈರಸ್ ಹೆಚ್ಚು ಸೋಂಕಿಲ್ಲ. ದೇಶದ 133 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಗುರುತಿಸಿದೆ ಎಂದು ತಿಳಿಸಿದರು.

ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಜತೆ, ಜತೆಗೆ ಕಾರ್ಯೋನ್ಮುಖವಾಗುತ್ತಿದೆ. ಅಷ್ಟೇ ಅಲ್ಲ ದೇಶದಲ್ಲಿನ ಆರೋಗ್ಯ ಸಿಬ್ಬಂದಿಗಳು ತಮ್ಮನ್ನು ಲೆಕ್ಕಿಸದೇ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನರ್ಸ್, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆಯಂತಹ ಘಟನೆ ನಡೆಯುತ್ತಿದೆ. ಆದರೂ ಧೈರ್ಯಗೆಡದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next