Advertisement
ಹಜ್ ಭವನದಲ್ಲಿ 500 ಬೆಡ್ ವ್ಯವಸ್ಥೆ ಮಾಡಿದ್ದು, ಈಗಾಗಲೇ ಅರ್ಧದಷ್ಟು ಸೋಂಕಿತರನ್ನು ರವಾನಿಸಲಾಗಿದೆ. ಉಳಿದಂತೆ ಕೋರಮಂಗಲ ಕ್ರೀಡಾಂಗಣದಲ್ಲಿ ಸಾವಿರ ಬೆಡ್ಗಳ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಕಳೆದ 2ದಿನಗಳ ಸೋಂಕಿತರ ಸಂಖ್ಯೆ ಗಮನಿಸಿದರೆ ಶೀಘ್ರ ಇದು ಕೂಡ ಭರ್ತಿಯಾಗಲಿದೆ. ಉಳಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ವ್ಯವಸ್ಥೆ ಕೈಗೊಂಡಿದ್ದು, ಅದನ್ನು ಮೀರಿ ಸೋಂಕಿತರ ಸಂಖ್ಯೆ ಹೆಚ್ಚಾದರೆ, ಬೆಡ್ಗಳ ಕೊರತೆ ಕಂಡುಬಂದರೆ ಜನವಸತಿ ಇಲ್ಲದ ಬಿಡಿಎ ಖಾಲಿ ಅಪಾರ್ಟ್ಮೆಂಟ್ಗಳನ್ನು ಬಳಸಿಕೊಳ್ಳುವ ಚಿಂತನೆ ನಡೆದಿದೆ.
ಬೆಂಗಳೂರು: ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕೋವಿಡ್ ಆರೈಕೆ ಕೇಂದ್ರ ತೆರೆಯಲು ಪಾಲಿಕೆ ಮುಂದಾಗಿದೆ. ಕೋವಿಡ್ 19 ಸೋಂಕಿನ ಲಕ್ಷಣ ಇಲ್ಲದ ಸೋಂಕಿತರ ಚಿಕಿತ್ಸೆಗೆ ಈ ಆರೈಕೆ ಕೇಂದ್ರ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ನಗರದಲ್ಲಿ ಸೋಮವಾರ ಹೊಸದಾಗಿ 6 ಕೋವಿಡ್ ಆರೈಕೆ ಕೇಂದ್ರಗಳನ್ನು ಬಿಬಿಎಂಪಿಯ ಅಧಿಕಾರಿಗಳು ಗುರುತಿಸಿದ್ದಾರೆ.
Related Articles
Advertisement
ಕಳೆದ 3 ದಿನಗಳಿಂದ ನಗರದಲ್ಲಿ ಸೋಂಕಿತರ ಸಂಖ್ಯೆ ನ್ಪೋಟವಾಗುತ್ತಿದೆ. ಇದರ ಬೆನ್ನಲ್ಲೇ ಆಸ್ಪತ್ರೆಗಳ ಕೊರತೆ ಸೃಷ್ಟಿಯೂ ಎದುರಾಗಿದೆ. ಹೀಗಾಗಿ, ಕೋವಿಡ್ 19 ಸೋಂಕಿನ ಲಕ್ಷಣ ಇಲ್ಲದ ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಗುಣಮುಖ ಕಡಿಮೆ, ಬೆಡ್ಗಳ ಕೊರತೆ: ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕಿಗೆ ಹೆಚ್ಚಾಗಿ ವೃದ್ಧರು ತುತ್ತಾಗುತ್ತಿದ್ದು, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಪ್ರಮಾಣ ತೀರಾ ಕಡಿಮೆ ಇದೆ. ಲಾಕ್ಡೌನ್ ಸಂದರ್ಭದಲ್ಲಿ ಶೇ.60ಕ್ಕೂ ಅಧಿಕ ಪ್ರಮಾಣ ಗುಣಮುಖರಾದರೆ, ಭಾಗಶಃ ಲಾಕ್ಡೌನ್ ಸಡಿಲಿಕೆ ನಂತರ ಶೇ.10 ಕ್ಕೆ ಕುಸಿದಿದೆ. ಕಳೆದ 2 ದಿನಗಳಲ್ಲಿ 1,379 ಸೋಂಕಿತರು ದೃಢ ಪಟ್ಟರೆ, ಬಿಡುಗಡೆಯಾದವರು ಕೇವಲ 7 ಮಂದಿ. ಹೀಗಾಗಿ ಬೆಡ್ಗಳ ಕೊರತೆ ಎದುರಾಗುತ್ತಿದೆ. ಗುಣಮುಖ ಪ್ರಮಾಣ ಹೆಚ್ಚಳವಾಗದಿದ್ದರೆ ಇನ್ನಷ್ಟು ತೊಂದರೆ ಎದುರಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸೋಂಕಿತರಿಗೆ ಬೆಡ್ಗಳ ಕೊರತೆ ಎದುರಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಬಿಡಿಎ ಖಾಲಿ ಅಪಾರ್ಟ್ಮೆಂಟ್ಗಳನ್ನು ಬಳಸಿಕೊಳ್ಳುವ ಚಿಂತನೆ ಇದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸದ್ಯ ಬೆಡ್ಗಳ ಕೊರತೆ ಇಲ್ಲ. -ಸರ್ಫ್ರಾಜ್ ಖಾನ್, ಪಾಲಿಕೆ ಜಂಟಿ ಆಯುಕ್ತ