Advertisement

ಕೋವಿಡ್-19 ಭೀತಿ: ಅಂತಿಮ ಪರೀಕ್ಷೆ ಇಲ್ಲದೆ 1ರಿಂದ 8ನೇ ತರಗತಿ ಮಕ್ಕಳಿಗೆ ತೇರ್ಗಡೆ ಭಾಗ್ಯ!

12:32 AM Mar 21, 2020 | Nagendra Trasi |

ಲಕ್ನೋ:ಕೋವಿಡ್ 19  ವೈರಸ್ ಮಹಾಮಾರಿ ಭೀತಿಯ ತಗುಲುವ ಭೀತಿಯ ಹಿನ್ನೆಲೆಯಲ್ಲಿ ಅಂತಿಮ ಪರೀಕ್ಷೆ ನಡೆಸದೇ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿರುವುದಾಗಿ ಉತ್ತರಪ್ರದೇಶದ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಾಥಮಿಕ ಶಾಲೆಯ ಪರೀಕ್ಷೆಗಳನ್ನು ಮಾರ್ಚ್ 23ರಿಂದ 28ರವರೆಗೆ ಪರೀಕ್ಷೆಗಳನ್ನು ನಡೆಸಲು ಟೈಮ್ ಟೇಬಲ್ ಸಿದ್ಧಪಡಿಸಲಾಗಿತ್ತು.

ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಒಂದರಿಂದ 8ನೇ ತರಗತಿಯವರೆಗೆ ಅಂತಿಮ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶವನ್ನು ಕಳುಹಿಸಿದೆ. ಏಪ್ರಿಲ್ 2ರವರೆಗೆ ಶಾಲೆಗಳನ್ನು ಬಂದ್ ಮಾಡುವಂತೆ  ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರೇಣುಕಾ ಕುಮಾರ್ ತಿಳಿಸಿದ್ದಾರೆ.

ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯುಪಿ ಸರ್ಕಾರ ಎಲ್ಲಾ ಶೈಕ್ಷಣ ಸಂಸ್ಥೆಗಳು, ಸಿನಿಮಾ ಹಾಲ್, ಮಲ್ಟಿಪ್ಲೆಕ್ಸ್ ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದಂತೆ ಏಪ್ರಿಲ್ 2ರವರೆಗೆ ನಿರ್ಬಂಧ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next