Advertisement

ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ: ಬಸವರಾಜ ಬೊಮ್ಮಾಯಿ

08:07 AM Apr 24, 2020 | keerthan |

ಉಜಿರೆ: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿದ್ದೇವೆ. ಕೃಷಿ, ಗ್ರಾಮೀಣ ಕ್ಷೇತ್ರಗಳಲ್ಲಿ ಸಡಿಲಿಕೆ ಮಾಡಿದ್ದೇವೆ. ಬಹುತೇಕವಾಗಿ ಕರ್ನಾಟಕದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ ಎಂದರು.

ಏಪ್ರಿಲ್ 27 ಕ್ಕೆ ಮತ್ತೆ ಪ್ರಧಾನಿ ಮೋದಿಯವರು ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.  ಮೇ ಮೂರರವರೆಗೆ ಲಾಕ್ ಡೌನ್ ಇರುತ್ತದೆ. ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next