Advertisement

ಕೋವಿಡ್ 19 ವೈರಸ್ ವಿರುದ್ಧ ಹೋರಾಟ: ಸಿಂಗಾಪುರದಿಂದ ಪಾಠ ಕಲಿಯಬೇಕಿದೆ

08:35 AM Apr 03, 2020 | Hari Prasad |

ಸಿಂಗಾಪುರ: ಚೀನದ ನೆರೆಯ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಳ್ಳುವ ಸಿಂಗಾಪುರ, ತೈವಾನ್‌ ಹಾಕಾಂಗ್‌ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳು ಆರಂಭದಲ್ಲೇ ಉಪಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಈ ರಾಷ್ಟ್ರಗಳು ಕೋವಿಡ್ 19 ವೈರಸ್ ನ ಆರಂಭಿಕ ಆಘಾತದಿಂದ ತಪ್ಪಿಸಿಕೊಂಡಿದ್ದವು. ಆದರೆ ಏಷ್ಯಾದಲ್ಲಿ ಆರಂಭವಾದ ಈ ಮಾರಣಾಂತಿಕ ವೈರಸನ್ನು ಐರೋಪ್ಯ ರಾಷ್ಟ್ರಗಳು ಲಘವಾಗಿ ಪರಿಗಣಿಸಿದ್ದವು. ಇದರ ಫ‌ಲವಾಗಿ ಇಂದು ಐರೋಪ್ಯ ರಾಷ್ಟ್ರಗಳಲ್ಲೂ ಕೊರೊನಾ ವ್ಯಾಪಕವಾಗುತ್ತಿದೆ.

Advertisement

ಹಾಗೆ ನೋಡಿದರೆ ಸಿಂಗಾಪುರ ಹೆಚ್ಚು ಪ್ರವಾಸಿಗರನ್ನು ಹೊಂದಿರುವ ಮತ್ತು ಮುಖ್ಯ ಏರ್‌ಪೋರ್ಟ್‌ಗಳುಳ್ಳ ಪ್ರದೇಶವಾಗಿದೆ. ಚೀನದ ಪ್ರವಾಸಿಗರು, ಉದ್ಯೋಗಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶ ಅದಾಗಿದೆ. ಚೀನದಲ್ಲಿ ವೈರಸ್‌ ಭೀತಿ ಹೆಚ್ಚಾಗುತ್ತಿದ್ದ ಸಂದರ್ಭದಲ್ಲೇ ಸಾವಿನ ಸಂಖ್ಯೆಯೂ ಏರಿಕೆಯಾಗತೊಡಗಿತು.

ಆ ಸಂದರ್ಭದಿಂದಲೇ ಸಿಂಗಾಪುರದಲ್ಲಿ ಸುಮಾರು 6 ಲಕ್ಷ ಜನರನ್ನು ತನಿಖೆಗೆ ಒಳಪಡಿಸಿತ್ತು. ತತ್‌ಕ್ಷಣ ಕಾರ್ಯಪ್ರವೃತ್ತವಾದ ಸರಕಾರ ಮುಖ್ಯವಾಗಿ ವಿಮಾನಗಳು, ರೈಲು ಸೇವೆಗಳಿಗೆ ಆರಂಭದಲ್ಲೇ ತಡೆ ದೊರೆಯಿತು. ಇದರಿಂದ ಹೊರ ದೇಶದಲ್ಲಿರುವವರು ಮುಖ್ಯವಾಗಿ ಚೀನದಲ್ಲಿರುವವರು ಸಿಂಗಾಪುರ ಪ್ರವೇಶಿಸುವುದಕ್ಕೆ ರೆಡ್‌ ಸಿಗ್ನಲ್‌ ನೀಡಿದಂತಾಯಿತು.

ವೇಗವಾಗಿ ಪತ್ತೆ ಹಚ್ಚಿದ ಸಿಂಗಾಪುರ
ಕೋವಿಡ್ 19 ವೈರ ಸನ್ನು ಅತ್ಯಂತ ತುರ್ತಾಗಿ ಹತ್ತಿಕ್ಕುತ್ತಿರುವ ದೇಶಗಳ ಪೈಕಿ ಸಿಂಗಾಪುರ ಒಂದಾಗಿದೆ. ಸಿಂಗಾಪುರದಲ್ಲಿ ಕೊರೊನಾದಿಂದಾಗಿ ಇದುವರೆಗೂ ಒಂದೇ ಒಂದು ಸಾವು ಸಂಭವಿಸದಿರುವುದು ಕೂಡ ಗಮನ ಸೆಳೆದಿದೆ. ಕೊರೊನಾ ಪೀಡಿತರನ್ನು ಅತ್ಯಂತ ವೇಗವಾಗಿ ಪತ್ತೆ ಹೆಚ್ಚಿರುವುದು ಒಳ್ಳೆಯ ಕ್ರಮವಾಗಿದೆ. ಸೋಂಕು ತಗುಲಿರುವ ಶಂಕೆ ಇರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿತ್ತು. ಯಾರೂ ಕೂಡ ಪರೀಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಸೂಕ್ತ ಕ್ರಮವಹಿಸಿದ ಸಿಂಗಾಪುರ, ಸೋಂಕು ಪೀಡಿತರನ್ನು ಪ್ರತ್ಯೇಕಿಸಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುತ್ತಿದೆ. ಇದರಲ್ಲಿ ಸಿಂಗಾಪುರ ಆರೋಗ್ಯ ಇಲಾಖೆಯ ಕಾರ್ಯ ಮೆಚ್ಚಲೇಬೇಕು.

ಸೋಂಕು ದೃಢಪಟ್ಟವರನ್ನು ಕೂಡಲೇ ಸಾರ್ವಜನಿಕ ವಲಯದಿಂದ ಪ್ರತ್ಯೇಕಿಸಲಾಗಿತ್ತು. ಅವರನ್ನು ವೈದ್ಯಕೀಯ ಶಿಬಿರಗಳಲ್ಲಿಟ್ಟು ನಿಗಾದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶಿಬಿರಗಳಲ್ಲಿರುವ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಜತೆಗೆ ಆಧುನಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸೋಂಕಿತರು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸಿ ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲೇ ಎಚ್ಚೆತ್ತ ಸಿಂಗಾಪುರ ಸರಕಾರ, ತನ್ನ ಪ್ರಜೆಗಳೊಂದಿಗೆ ಹಾಗೂ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಸದಾ ಸಂಪರ್ಕದಲ್ಲೇ ಇತ್ತು.

Advertisement

ಜನರಿಗೆ ಮಾಹಿತಿ
ಸೋಂಕಿನ ಮಾಹಿತಿಯನ್ನು ಜನರಿಗೆ ತಿಳಿಸಿ ಭಯಭೀತರಾಗದಂತೆ ನಿಗಾವಹಿಸಿತ್ತು. ಅಲ್ಲದೇ ಸೋಂಕು ಪೀಡಿತರನ್ನು ಗುರುತಿಸಿ ಅವರನ್ನು ಸಮಾಜದಿಂದ ಪ್ರತ್ಯೇಕಿಸಿ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಸಿಂಗಾಪುರ ಇಡೀ ದೇಶಕ್ಕೆ ಮಾದರಿಯಾಯಿತು. ಹೊರ ದೇಶಗಳಿಂದ ಜನರು ಬರದಂತೆ ನಿರ್ಬಂಧ ವಿಧಿಸಲಾಗಿದ್ದು, ತನ್ನ ಪ್ರಜೆಗಳಿಗೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳದಂತೆಯೂ ಸೂಚಿಸಿದೆ. ಸರಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಪ್ರಜೆಗಳು ನಿಷ್ಠೆಯಿಂದ ಪಾಲಿಸುತ್ತಿದ್ದಾರೆ.

27ರಿಂದ ಹೆಲ್ತ್‌ ಡಿಕ್ಲೆರೇಶನ್‌
ಸಿಂಗಾಪುರಕ್ಕೆ ಮಾರ್ಚ್‌ 27ರ ಬಳಿಕ ಆಗಮಿಸುವ ಎಲ್ಲರೂ ತಮ್ಮ ಆರೋಗ್ಯ ಮಾಹಿತಿಯನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಅಲ್ಲಿನ ಸರಕಾರ ಸೂಚಿಸಿದೆ. ಇದನ್ನು ವಿದೇಶಿಗರೂ ಮತ್ತು ಸಿಂಗಾಪುರದ ಪ್ರಜೆಗಳೂ ನೀಡಲೇಬೇಕಾಗಿದೆ. ಸಿಂಗಾಪುರದಲ್ಲಿ ಒಟ್ಟು 455 ಪ್ರಕರಣಗಳು ದಾಖಲಾಗಿದ್ದು, 144 ಮಂದಿ ಸುಧಾರಿಸಿದ್ದಾರೆ. 309 ಮಂದಿಯಲ್ಲಿ ಈಗ ಸೋಂಕು ಕಂಡು ಬಂದಿದೆ. ಇಬ್ಬರು ಬಲಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next