Advertisement

ಕೋವಿಡ್-19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ: ಬಂಟ್ವಾಳದ ಮಹಿಳೆ ಸಾವು

09:26 AM Apr 20, 2020 | keerthan |

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 50 ವರ್ಷದ ಮಹಿಳೆ‌ ಉಸಿರಾಟದ ಸಮಸ್ಯೆಯಿಂದ ಶನಿವಾರ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆಕೆಯ ಗಂಟಲು ದೃವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು.

ಆದರೆ ವರದಿ ಕೈ ಸೇರುವ ಮುನ್ನ ಅಂದರೆ ರವಿವಾರ ಬೆಳಗ್ಗೆ 9.15ರ ಸಮಯಕ್ಕೆ ಅವರು ಸಾವನ್ನಪ್ಪಿದ್ದಾರೆ. ಸದ್ಯ ವೈದ್ಯಕೀಯ ವರದಿ ಜಿಲ್ಲಾಡಳಿತದ ಕೈ ಸೇರಿದ್ದು, ಮಹಿಳೆ ಸೋಂಕಿಗೆ ಬಲಿಯಾಗಿದ್ದು ದೃಢವಾಗಿದೆ.

ಇದರಿಂದ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದವರ ಸಂಖ್ಯೆ 15ಕ್ಕೇರಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 11 ಸೋಂಕು ಪ್ರಕರಣಗಳು ಕಂಡುಬಂದಿದ್ದರೂ 10 ಸೋಂಕಿತರು ಗುಣಮುಖರಾಗಿದ್ದ ಕಾರಣ ಜನರು ನಿರಾಳರಾಗಿದ್ದರು. ಆದರೆ ಮೊದಲ ಸಾವಿನ ಸುದ್ದಿಯ ಕಾರಣದಿಂದ ಕರಾವಳಿ ಜಿಲ್ಲೆಯ ಜನರು ಗಾಬರಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next