Advertisement
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಈಗ 7,214ಕ್ಕೆ ಏರಿಕೆಯಾಗಿದ್ದು, ಶುಕ್ರವಾರ ಅರಕಲಗೂಡು ಮತ್ತು ಹಾಸನ ತಾಲೂಕಿನ ತಲಾ ಒಬ್ಬರು ಸಾವಿನೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 177ಕ್ಕೇರಿದೆ. ಸಮಾಧಾನದ ಸಂಗತಿ ಯೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗುತ್ತಿದ್ದು, ಶುಕ್ರವಾರ 167 ಮಂದಿ ಗುಣಮುಖರಾಗುವುದರೊಂದಿಗೆ 4,782 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. ಐಸಿಯುನಲ್ಲಿರುವ 57 ಮಂದಿ ಸೇರಿ ಇನ್ನೂ 2,255 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
Related Articles
Advertisement
ಇತ್ತೀಚಿನ ದಿನಗಳಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಾರದಿದ್ದರೂ ಜನರು ಸಾವಿಗೆ ತುತ್ತಾಗುತ್ತಿದ್ದಾರೆ. ಆಮ್ಲಜನಕ ನಿಗದಿತ ಪ್ರಮಾಣಕ್ಕಿಂತಲೂ ಕಡಿಮೆಯಾದರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ತಪ್ಪದೇ ಕೊರೋನಾ ಪರೀಕ್ಷೆಗೆ ಒಳಗಾಗಬೇಕು. ಕೋವಿಡ್ ಪರೀಕ್ಷೆ ಮಾಡಿದಾಗ ತಕ್ಷಣ ಅಥವಾ ಒಂದು ದಿನದ ಒಳಗೆ ವರದಿ ಬರುತ್ತದೆ ಆದ್ದರಿಂದ ಸಾವಜನಿಕರು ಸಹರಿಸಬೇಕೆಂದು ಹೇಳಿದ್ದಾರೆ. .
ರೋಗ ಲಕ್ಷಣಗಳು ಇದ್ದರೂ ಅಥವಾ ಇಲ್ಲದಿದ್ದರೂ ಪರೀಕ್ಷೆಗೆ ಒಳಗಾಗುವುದರಿಂದ ಸೋಂಕು ಇರುವುದು ದೃಢ ಪಟ್ಟರೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡಬಹುದು. ಕೊರೋನಾ ಪರೀಕ್ಷೆಗೆ ತಾಲೂಕು ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಕೊರೊನಾ ಪರೀಕ್ಷೆಗಳು ಹಾಗೂ ಸಲಹೆಗಳಿಗಾಗಿ ಸಹಾಯವಾಣಿ ತೆರೆಯಲಾಗಿದ್ದು, ಸಾರ್ವಜನಿಕರು 08172-246575 ಸಂಖ್ಯೆಗೆ ಕರೆ ಮಾಡಬಹುದೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.