Advertisement

92 ಮಂದಿಗೆ ಸೋಂಕು

01:21 PM Aug 24, 2020 | Suhan S |

ಮೈಸೂರು: ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಮುಷ್ಕರದಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌-19 ವರದಿ ದಾಖಲಾಗಿಲ್ಲ. ಆದರೆ, ಭಾನುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಸ್ವಾಬ್‌ ಟೆಸ್ಟ್‌ನಲ್ಲಿ 92 ಮಂದಿಗೆ ಸೋಂಕು ದೃಢಪಟ್ಟಿದೆ.

Advertisement

ಜಿಲ್ಲೆಯಲ್ಲಿ ಪ್ರತಿನಿತ್ಯ ನೂರಿನ್ನೂರು ಪ್ರಕರಣ ದಾಖಲಾಗುತ್ತಿತ್ತು. ಸಾವಿನ ಪ್ರಮಾಣವೂ ಹೆಚ್ಚಾಗಿತ್ತು. ಆದರೆ, ಕಳೆದೊಂದು ವಾರದಿಂದ ಮೈಸೂರಿನಲ್ಲಿ ಸೋಂಕಿನ ಅಬ್ಬರ ಕಡಿಮೆಯಾಗಿದೆ. ಭಾನುವಾರ 92 ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 12396ಕ್ಕೆ ಏರಿಕೆಯಾಗಿದೆ. ಭಾನುವಾರ ಗುಣಮುಖರಾ ದವರು ಹಾಗೂ ಸೋಂಕಿನಿಂದ ಮೃತಪಟ್ಟವರ ಪ್ರಕರಣ ವರದಿಯಾಗಿಲ್ಲ. ಸದ್ಯ 4774 ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದು, ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್, ಖಾಸಗಿ ಆಸ್ಪತ್ರೆಗಳು ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 7302 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 320 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಭಾರ ವೈದ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ವೈದ್ಯಕೀಯ ಸಿಬ್ಬಂದಿ ಕಳೆದ 3 ದಿನಗಳಿಂದ ಮುಷ್ಕರ ನಡೆಸುತ್ತಿದ್ದರು. ಜಿಪಂ ಸಿಇಒ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಇದರಿಂದಾಗಿ ಕೋವಿಡ್‌ ಪರೀಕ್ಷೆ ನಡೆಯದೆ 2 ದಿನಗಳಿಂದ ಕೋವಿಡ್‌ ಪ್ರಕರಣ ದಾಖಲಾಗಿರಲಿಲ್ಲ. ಸಿಎಂ ಯಡಿಯೂರಪ್ಪ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವೈದ್ಯರು ಮುಷ್ಕರ ಹಿಂಪಡೆದಿದ್ದಾರೆ. ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next