Advertisement

ಒಂದು ಸಾವು-37 ಜನರಲ್ಲಿ ಸೋಂಕು

03:52 PM Aug 07, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಜು.25ರಂದು ಆಸ್ಪತ್ರೆಗೆ ದಾಖಲಾಗಿದ್ದ ಗುರುಮಠಕಲ್‌ನ ಲಕ್ಷ್ಮೀ ನಗರದ 82 ವರ್ಷದ ಪುರುಷ ಪಿ-98746 ಆ.5ರಂದು ಮರಣ ಹೊಂದಿದ್ದು, ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ತಲುಪಿದೆ.

Advertisement

ಕ್ರೂರಿ ವೈರಸ್‌ ಅಟ್ಟಹಾಸ ಮುಂದುವರಿಸಿದ್ದು ಮತ್ತೆ 37 ಜನರಲ್ಲಿ ವೈರಸ್‌ ಹರಡಿದೆ. ಯಾದಗಿರಿ ನಗರ ಮತ್ತು ಗ್ರಾಮೀಣದ 6, ಶಹಾಪುರ ವ್ಯಾಪ್ತಿಯ 17 ಹಾಗೂ 14 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2700 ಜನರು ಸೋಂಕಿಗೆ ತುತ್ತಾಗಿದ್ದಾರೆ.

1065 ಸಂಪರ್ಕಿತರು ಪತ್ತೆ: ಜಿಲ್ಲೆಯಲ್ಲಿ ಗುರುವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 561 ಜನರನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 9724 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 504 ಜನರು ಪತ್ತೆಯಾಗಿದ್ದು, ಒಟ್ಟು 11509 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಆರೋಗ್ಯ ಇಲಾಖೆ ಗುರುವಾರ 257 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 195 ಜನರ ವರದಿ ನೆಗೆಟಿವ್‌ ಬಂದಿವೆ. ಜಿಲ್ಲೆಯಲ್ಲಿ 250 ಕಂಟೇನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 189 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 56, ಸುರಪುರ 71 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್  ಕೇರ್‌ ಸೆಂಟರ್‌ನಲ್ಲಿ 86 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಎಡಿಸಿ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next