Advertisement

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ: ಸುಧಾಕರ್‌ 

07:25 AM Apr 29, 2020 | mahesh |

ಚಿಕ್ಕಬಳ್ಳಾಪುರ: ಇಡೀ ದೇಶಕ್ಕೆ ಹೋಲಿಸಿದರೆ ಮಹಾಮಾರಿ ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದರು.

Advertisement

ಜಿಲ್ಲಾ ಕೇಂದ್ರದಎಂಜಿ ರಸ್ತೆಯಲ್ಲಿರುವ ಮರಳು ಸಿದ್ದೇಶ್ವರ ದೇವಾಲಯದ ಸಮೀಪ ನೂತನವಾಗಿ ಸರಬರಾಜು ಆಗಿರುವ ಸಂಚಾರ ಗಂಟಲು ದ್ರವ ಪರೀಕ್ಷಾ ಘಟಕಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿ ಮನೆಗೆ
ತೆರಳಿದ್ದಾರೆ. 20 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಇನ್ನೂ 300 ಪ್ರಕರಣಗಳು ಆಕ್ಟೀವ್‌ ಕೇಸ್‌ಗಳು ಇವೆ. ಮುಖ್ಯವಾಗಿ ಕೊರೊನಾ ತಡೆಗೆ ನಾಗರಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ತುರ್ತು ಸೇವೆಗಳಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದೆ. ವಿಶೇಷ‌ವಾಗಿ ಕೃಷಿ ಚುಟವಟಿಕೆಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next