Advertisement

ಕೋವಿಡ್ : ಮೃತರ ಕುಟುಂಬಕ್ಕೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಗಡುವು

10:16 PM Apr 27, 2022 | Team Udayavani |

ನವದೆಹಲಿ: ಮಾ.20ರೊಳಗೆ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಕುಟುಂಬವು ಸರ್ಕಾರದಿಂದ ಪರಿಹಾರ ಪಡೆಯಲು 60 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ) ತಿಳಿಸಿದೆ.

Advertisement

ಹಾಗೆಯೇ ಮಾ.20ರ ನಂತರ ಸಾವನ್ನಪ್ಪಿದವರ ಕುಟುಂಬಕ್ಕೆ ಅರ್ಜಿ ಸಲ್ಲಿಸಲು ಮರಣದ ದಿನದಿಂದ 90 ದಿನಗಳ ಸಮಯಾವಕಾಶ ಇರಲಿದೆ. ಒಂದು ವೇಳೆ ಅರ್ಜಿದಾರರು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಲು ವಿಫ‌ಲವಾದಲ್ಲಿ ಅವರು ಎನ್‌ಡಿಎಂಎ ಕುಂದುಕೊರತೆ ಪರಿಹಾರ ಸಮಿತಿಗೆ ಮನವಿ ಮಾಡಬೇಕು. ಅರ್ಜಿದಾರರ ಸ್ಥಿತಿಯನ್ನು ಕೂಲಂಕಶವಾಗಿ ಪರಿಶೀಲಿಸಿ ಸಮಿತಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕೇರಳ ಸರ್ಕಾರವು ಮತ್ತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಬುಧವಾರ ಘೋಷಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಲಾಗಿದೆ.

ಭಾರತದಲ್ಲಿ ಮಂಗಳವಾರದಿಂದ ಬುಧವಾರದವರೆಗೆ 2,927 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,279ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 32 ಸೋಂಕಿತರು ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next