Advertisement

ಖಾಸಗಿ ಆಸ್ಪತ್ರೆಗಳು ಬೆಡ್‌ ನೀಡದಿದ್ದರೆ ಒಪಿಡಿ ಬಂದ್‌

02:59 PM May 08, 2021 | Team Udayavani |

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರ ನಿಗದಿಪಡಿಸಿದ ಹಾಸಿಗೆ ನೀಡದಿದ್ದರೆ ಹೊರ ರೋಗಿಗಳ ವಿಭಾಗ (ಒಪಿಡಿ)ಬಂದ್‌ ಮಾಡಲಾಗುವುದು ಎಂದು ಕಂದಾಯ ಸಚಿವ ಹಾಗೂ ಹಾಸಿಗೆ ವ್ಯವಸ್ಥೆ ಉಸ್ತುವಾರಿ ಆರ್‌.ಅಶೋಕ್‌ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಕಣ್ಣಾ ಮುಚ್ಚಾಲೆ ಆಟ ಬಿಟ್ಟು ಸರ್ಕಾರಕ್ಕೆ ನೀಡಲೇ ಬೇಕಾದ ಹಾಸಿಗೆ ಬಿಟ್ಟುಕೊಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಇನ್ನೆರಡು ದಿನದಲ್ಲಿ ಹಾಸಿಗೆ ಕೊಡದಿದ್ದರೆ ಒಪಿಡಿ ಬಂದ್‌ ಮಾಡಿಸುತ್ತೇವೆಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳು ನಿಗದಿತ ಹಾಸಿಗೆಬಿಟ್ಟು ಕೊಡಲು ಒಪ್ಪಿಕೊಂಡಿವೆ. ನೋಡಲ್‌ ಅಧಿಕಾರಿಗಳು ನಿತ್ಯ ಪರಿಶೀಲನೆ ಮಾಡಲಿದ್ದಾರೆ. ಆರೋಗ್ಯ ತಪಾಸಣೆಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ಪಡೆಯಬಾರದು ಎಂದು ಸೂಚನೆ ನೀಡಲಾಗಿದೆ. ಹಾಸಿಗೆ ಹಂಚಿಕೆಗೆ ನಿಯೋಜಿಸಿದ್ದ ಕೆಲವು ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದೇವೆ.

ತುಷಾರ್‌ ಗಿರಿನಾಥ್‌ ಅವರನ್ನು ಮುಖ್ಯನೋಡಲ್‌ ಅಧಿಕಾರಿಯಾಗಿ ನೇಮಿಸಿ ಹಾಸಿಗೆ ಹಂಚಿಕೆ ಹೊಣೆಗಾರಿಕೆ ನೀಡಲಾಗಿದೆ. ಹಾಸಿಗೆ ವ್ಯವಸ್ಥೆ ನಿರ್ವಹಣೆ ಮಂಜುನಾಥ್‌ ಪ್ರಸಾದ್‌ ಅವರಿಗೆ ನೀಡಿದ್ದೇವೆ . ಇಂದಿನಿಂದಲೇ ಅವರುಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next