Advertisement

ಸೋಂಕಿತರ ಸಾವಿಗೆ ಡೀಸಿಯೇ ಹೊಣೆ

04:51 PM May 12, 2021 | Team Udayavani |

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆಕಲ್ಪಿಸಲು ಜಿಲ್ಲಾಡಳಿತ ಸಂಪೂರ್ಣ ವಿಫ‌ಲರಾಗಿದ್ದು,2ನೇ ಅಲೆ ಪ್ರಾರಂಭವಾದ ನಂತರ ಕೊರೊನಾಗೆಜಿಲ್ಲೆಯ 200 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದು,ಇದಕ್ಕೆ ಜಿಲ್ಲಾಧಿಕಾರಿಯವರೆಹೊಣೆ ಎಂದು ಜೆಡಿಎಸ್‌ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಯವರುತಮ್ಮ ಬಳಿ ಹಣವಿದ್ದರೂಸೋಂಕಿತರ ಚಿಕಿತ್ಸೆಗೆ ಅಗತ್ಯ ಔಷಧ ಖರೀದಿಗೆ ಹಾಗೂಮೂಲ ಸೌಕರ್ಯಗಳಿಗೆ ಬಿಡುಗಡೆ ಮಾಡಿಲ್ಲ. ನಾನುಹತ್ತಾರು ಬಾರಿ ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದರೂ ಹಣ ಬಿಡುಗಡೆ ಮಾಡದೆ ಆರೋಗ್ಯ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೋಮವಾರಜಿಲ್ಲೆಗೆ ಆಗಮಿಸುತ್ತಿರುವುದನ್ನು ಖಾತರಿಪಡಿಸಿಕೊಂಡುಸೋಮವಾರ ಬೆಳಗ್ಗೆ ಹಣ ಬಿಡುಗಡೆ ಮಾಡಿದ್ದಾರೆ.

ಹಣ ಬಿಡುಗಡೆಯಲ್ಲಿಯೂ ತಾಲೂಕುಗಳ ನಡುವೆತಾರತಮ್ಯ ಮಾಡಿದ್ದಾರೆ ಎಂದು ದೂರಿದರು.ಜಿಲ್ಲಾಧಿಕಾರಿಯವರ ಅಸಹಕಾರದ ಬಗ್ಗೆ ನಾನುಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ಅವರ ಗಮನ ಸೆಳೆದಾಗ ಅವರು ಪ್ರತಿ ವಿಧಾನಸಭಾಕ್ಷೇತ್ರಕ್ಕೂ ತಲಾ ಒಂದು ಕೋಟಿ ರೂ.ಗಳನ್ನು ಕೊರೊನಾಸೋಂಕಿತರ ಚಿಕಿತ್ಸೆಗೆ ಒದಗಿಸಲಾಗಿದೆ. ಹಾಸನಜಿಲ್ಲಾಧಿಕಾರಿಯವರು ಏಕೆ ಪ್ರಸ್ತಾವನೆ ಸಲ್ಲಿಸಲಿಲ್ಲವೋಗೊತ್ತಿಲ್ಲ ಎಂದಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಉತ್ತಮಚಿಕಿತ್ಸಾ ಸೌಲಭ್ಯ ಕಲ್ಪಿಸುವ ಕಾಳಜಿ ಜಿಲ್ಲಾಧಿಕಾರಿಯವರಿಗೆ ಇದ್ದಿದ್ದರೆ ಸುಮಾರು 20 ಕೋಟಿಅನುದಾನವನ್ನು ಕೇಳಲು ಏನು ಅಡ್ಡಿಯಾಗಿತ್ತು ?ಬೆಂಗಳೂರು ಮಹಾನಗರದ ನಂತರ ಹಾಸನ ಜಿಲ್ಲೆಯಲ್ಲಿಯೇ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೂಸೋಂಕು ನಿಯಂತ್ರಣ ಹಾಗೂ ಚಿಕಿತ್ಸಾ ವ್ಯವಸ್ಥೆಕಲ್ಪಿಸಲು ಜಿಲ್ಲಾಧಿಕಾರಿಯವರು ಏಕೆ ಮುಂದಾಗುತ್ತಿಲ್ಲಎಂದು ತರಾಟೆಗೆ ತೆಗೆದುಕೊಂಡರು.ಕೊ

ರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಹಗಲುದರೋಡೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳು ತ್ತಿಲ್ಲ.ಜಿಲ್ಲೆಯ ಖಾಸಗಿ ಆಸ್ಪತ್ರೆಗಳೊಂದಿಗೆ ಜಿಲ್ಲಾಧಿ ಕಾರಿಯವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.ಈಗಲಾದರೂ ಜಿಲ್ಲಾಡಳಿತ ಸಮರೋಪಾದಿಯಲ್ಲಿಕೆಲಸ ಮಾಡಬೇಕು. ಇಲ್ಲದಿದ್ದರೆ ಜನರು ದಂಗೆ ಎದ್ದರೆಅದರ ಪರಿಣಾಮವನ್ನು ಜಿಲ್ಲಾಧಿಕಾರಿಯವರೇ ಎದುರಿಸ ಬೇಕಾದೀತು ಎಂದು ಎಚ್ಚರಿಕೆ ನೀಡಿದರು.

Advertisement

ಜಿಲ್ಲಾಡಳಿತಚುರುಕಾಗಿ ಕೆಲಸ ಮಾಡಿ ಸೋಂಕಿತರ ಜೀವ ಉಳಿಸಲುಮುಂದಾಗದಿದ್ದರೆ ಸಿಎಂ ನಿವಾಸದ ಬಳಿ ಧರಣಿಕೂರುತ್ತೇನೆ ಎಂದು ರೇವಣ್ಣ ಎಚ್ಚರಿಕೆ ನೀಡಿದರು.ಜಿಲ್ಲಾಧಿಕಾರಿ, ಎಸ್ಪಿ, ಡಿಎಚ್‌ಒ., ಹಿಮ್ಸ್‌ ನಿರ್ದೇಶಕರು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ತಾಲೂಕು ವೈದ್ಯಾಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಖಾಸಗಿಆಸ್ಪತ್ರೆಗಳು ಕೊರೊನಾ ಸೋಂಕಿತರ ಚಿಕಿತ್ಸೆಗೆ ದುಬಾರಿಶುಲ್ಕ ವಸೂಲಿ ಮಾಡುತ್ತಿದ್ದರೂ ಜಿಲ್ಲಾಡಳಿತ ಕ್ರಮಕೈಗೊಂಡಿಲ್ಲ . ಜಿಲ್ಲಾಡಳಿತಕ್ಕೆ ಸಾಧ್ಯವಾಗದಿದ್ದರೆ ಜನರೇಖಾಸಗಿ ಆಸ್ಪತ್ರೆಗಳಿಗೆ ಬುದ್ಧಿ ಕಲಿಸಿ ಎಂದು ಕರೆನೀಡಬೇಕಾದೀತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next