Advertisement

ಕಲಿಕೆ ನಿರಂತರತೆ ಅಧ್ಯಯನಕ್ಕೆ ಸಮಿತಿ

03:17 PM May 20, 2021 | Team Udayavani |

ಬೆಂಗಳೂರು: ಕೊರೊನಾದಿಂದ ಶಾಲಾ ಮಕ್ಕಳ ಶೈಕ್ಷಣಿಕಚಟುವಟಿಕೆ ಹಾಗೂ ಕಲಿಕೆ ನಿರಂತರತೆಗಾಗಿ ತಜ್ಞರ ಸಮಿತಿ ರಚಿಸಿ, ತಿಂಗಳೊಳಗೆ ವರದಿ ಪಡೆಯಲಾಗುವುದು ಎಂದು ಶಿಕ್ಷಣ  ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

Advertisement

2021-22ನೇ ಸಾಲಿನ ಶೈಕ್ಷಣಿಕ ವರ್ಷವೂ ನಿಗದಿಯಂತೆ ಆರಂಭವಾಗುವುದು ಕಷ್ಟಎಂಬುದನ್ನು ಅರಿತಸಚಿವರು ಬುಧವಾರವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ನಂತರ ಮಾತನಾಡಿದ ಅವರು, ವಿಶೇಷವಾಗಿಗ್ರಾಮೀಣ ಹಾಗೂ ಸರ್ಕಾರಿಶಾಲಾ ಮಕ್ಕಳನ್ನು ಕಲಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು, ಶಿಕ್ಷಣಹಕ್ಕಿನ ರಕ್ಷಣೆಗಾಗಿ ಪರ್ಯಾಯ ಕ್ರಮಗಳ ಬಗ್ಗೆ ಸಮಿತಿಯು ರೂಪುರೇಷೆ ಸಿದ್ಧಪಡಿಸಲಿದೆ ಎಂದರು.

ಸಮಿತಿಯಲ್ಲಿ ಶಿಕ್ಷಣ ತಜ್ಞರು, ಭಾರತೀಯ ವಿಜ್ಞಾನ ಸಂಸ್ಥೆಪ್ರತಿನಿಧಿಗಳು, ನಿಮ್ಹಾನ್ಸ್  ಪ್ರತಿನಿಧಿಗಳು, ರಾಜ್ಯದ ಆರೋಗ್ಯ ಇಲಾಖೆಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಜಯದೇವ ಹೃದ್ರೋಗ  ಸಂಸ್ಥೆಯ ನಿರ್ದೇಶಕರು, ಖಾಸಗಿ ಶಾಲೆಗಳ ಪ್ರತಿನಿಧಿ, ಪೋಷಕ ಸಂಘಟನೆಯ ಪ್ರತಿನಿಧಿಗಳು, ಶಿಕ್ಷಕಅಥವಾ ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next