Advertisement

ರಾಜ್ಯದ ಆಮ್ಲಜನಕ ರಾಜ್ಯದಲ್ಲೇ ಬಳಕೆ

09:12 PM May 20, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆಗೆ ಕೇಂದ್ರ ಸರಕಾರ ತಾತ್ವಿಕ ಒಪ್ಪಿಗೆ ನೀಡಿದ್ದು ಅಧಿಕೃತ ಆದೇಶ ಸದ್ಯದಲ್ಲೇ ಹೊರ ಬೀಳಲಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ಶೆಟ್ಟರ್‌ ಹೇಳಿದರು.

Advertisement

ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರುಗಳಾದ ಪಿಯೂಶ್‌ ಗೋಯೆಲ್‌, ಪ್ರಹ್ಲಾದ್‌ ಜೋಶಿ ಹಾಗೂ ಸದಾನಂದಗೌಡ ಅವರೊಂದಿಗೆ ಹಲವಾರು ಹಂತದಲ್ಲಿ ಮಾತುಕತೆಯನ್ನು ನಡೆಸಿದ್ದೆವು.

ಅಲ್ಲದೆ, ಹಲವಾರು ಪತ್ರಗಳನ್ನುಬರೆಯಲಾಗಿತ್ತು. ಈ ಮಾತುಕತೆ ಮತ್ತು ಸಮಾಲೋಚನೆಗೆ ಫಲ ದೊರೆತಿದೆ.ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ತಾತ್ವಿಕ ಒಪ್ಪಿಗೆಯನ್ನು ನೀಡಿದೆ. ಸದ್ಯದಲ್ಲೇ ಅಧಿಕೃತಘೋಷಣೆ ಹೊರಡಿಸಲಿದ್ದಾರೆ ಎಂದರು.

ಕೇಂದ್ರ ಸರಕಾರದಿಂದ ರಾಜ್ಯಕ್ಕೆಬಹಳಷ್ಟುನೆರವು ದೊರಕುತ್ತಿದೆ. ಕೇಂದ್ರ ಸರಕಾರ ಬಹೆÅàನ್‌ ಮತ್ತು ಕುವೈತ್‌ ನಿಂದ 180ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ರಾಜ್ಯಕ್ಕೆನೀಡಿದೆ. ಅಲ್ಲದೆ, ರೈಲು ಮೂಲಕ ಮೇ 11ರಂದು ಜಮ್‌ಶೇಡ್‌ ಪುರದಿಂದ 120ಎಂ.ಟಿ,ಮೇ15ರಂದು ಕಳಿಂಗಾನಗರದಿಂದ 180 ಎಂ.ಟಿ ಆಮ್ಲಜನಕ ಸರಬರಾಜು ಆಗಿದೆ. ಅಲ್ಲದೆ, ಮುಂದಿನ ಒಂದುವಾರದಲ್ಲಿ ಸುಮಾರು 320 ದ್ರವೀಕೃತಆಮ್ಲಜನಕ ರವಾನೆ ಆಗುವ ನಿರೀಕ್ಷೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next