Advertisement

ಕೋವಿಡ್ ಕಂಟಕ: ಅವಸಾನದತ್ತ ರೇಷ್ಮೆ ಉದ್ಯಮ

01:35 PM Oct 14, 2020 | Suhan S |

ದೊಡ್ಡಬಳ್ಳಾಪುರ: ಲಾಕ್‌ಡೌನ್‌ನಿಂದ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದ ಕಾರಣ ದಿಂದಾಗಿ ರೇಷ್ಮೆ ಸೀರೆಗಳ ಮಾರಾಟ ತೀವ್ರವಾಗಿ ಕುಸಿಯುತ್ತಿದೆ. ಸೀರೆಗಳಿಗೆ ಸೂಕ್ತ ಬೆಲೆಯಿಲ್ಲದೇ ಸಹಸ್ರಾರು ಸೀರೆಗಳು ದಾಸ್ತಾನಾಗುತ್ತಿದ್ದು ರೇಷ್ಮೆ ಬಟ್ಟೆ ತ‌ಯಾರಕರು ಕಂಗಾಲಾಗಿದ್ದಾರೆ.

Advertisement

ರೇಷ್ಮೆ ಸೀರೆಗಳಿಗೆ ಹೆಸರಾಗಿದ್ದ ದೊಡ್ಡ ಬಳ್ಳಾಪುರದ ಲಿ ಈಗ ಶೇ.10 ಭಾಗ ಮಾತ್ರ ರೇಷ್ಮೆ ಬಟ್ಟೆ ‌ತಯಾರಿಕೆ ನ‌ಡೆಯುತ್ತಿದೆ. ಕೋವಿಡ್  ಉದ್ಭವಿಸುವುದಕ್ಕೂ ಮುನ್ನವೇ ಗ‌ಗನಕ್ಕೇರಿದ ‌ ರೇಷ್ಮೆ ಬೆಲೆ,ನೇಯ್ದ ಬಟ್ಟೆಗೆ ಸೂಕ್ತ ಮಾರುಕಟ್ಟೆ ಬೆಲೆ ಇಲ್ಲದೇ ನೇಯ್ಗೆ ಉದ್ಯಮ ತತ್ತರಿಸಿದೆ.

ಸಹಸ್ರಾರು ಸೀರೆಗಳ ದಾಸ್ತಾನು : ಕೋವಿಡ್ ಲಾಕ್‌ಡೌನ್‌ ಆಗುವುದಕ್ಕೂ ಮುನ್ನ ರೇಷ್ಮೆ ನೂಲಿನ ಬೆಲೆ 4,200 ರೂ. ಇತ್ತು.ಈ ಬೆಲೆಗ ರೇಷ್ಮೆ ನೂಲು ಕೊಂಡಿದ್ದ ನೇಕಾರರು ರೇಷ್ಮೆ ಸೀರೆಗಳನ್ನು ಮಾರಾಟ ಮಾಡುವಾಗ ‌ಸೂಕ್ತ ಬೆಲೆ ಸಿಗದೇ ದಾಸ್ತಾನು ಮಾಡಿದ್ದರು. ನಂತರ ರೇಷ್ಮೆ ಬೆಲೆ 3,000ಕ್ಕೆ ಕುಸಿಯಿತು. ಕೆಲಕಾಲ 2,500 ರೂ. ಗ‌ಳಿಗೂ ಬಂದಿರು. ಈ ಬೆಲೆಗೆ ಅನುಗುಣವಾಗಿ ರೇಷ್ಮೆ ಸೀರೆಗಳ ಖರೀದಿದಾರರು ಕ‌ಡಿಮೆ ಬೆಲೆಗೆ ಕೇಳಲಾರಂಭಿಸಿದರು.

ಅಸಲಿನಲ್ಲಿಯೇ ವಿವಿಧ ನಮೂನೆಯ ಸೀರೆಗಳ ಮೇಲೆ 200 ರೂ. ಕಡಿಮೆ ಕೇಳಲಾರಂಭಿಸಿದಾಗ ನೇಕಾರ‌ರು ವಿಧಿಯಿಲ್ಲದೇ ‌ಮನೆಗಳಲ್ಲಿಯೇ ಸೀರೆಗಳನ್ನು ದಾಸ್ತಾನು ಮಾಡುವ ಪರಿಸ್ಥಿತಿ ಒದಗಿ ಬಂದಿತ್ತು. ಬಹುತೇಕ ಎಲಾ ರೇಷ್ಮೆ ಉದ್ಯಮಿಗಳ‌ ಮನೆಗಳಲ್ಲಿ ಅವರ ಶಕ್ತಿಗೆ ಅನುಸಾರ ದಾಸ್ತಾನು ಮಾಡುತ್ತಿದ್ದಾರೆ.

ಬಂಡವಾಳಕ್ಕೆ ಹೊಡೆತ: ಸೀರೆಗಳು ನಷ್ಟದ ಬೆಲೆಗೆ ಮಾರಲೊಪ್ಪದ ನೇಕಾರರು ದಾಸ್ತಾನು ಮಾಡುತ್ತಿದ್ದು, ಮಗ್ಗದ ಹಾಗೂ ಇತರೆ ಕೆಲಸದವರಿಗ ಕೆಲಸ ನೀಡಲಾದರೂ ಮಗ್ಗಗಳನ್ನು ನಡೆಸಬೇಕಿದೆ. ಹೀಗಾಗಿ ವಾರಕ್ಕೆ ಒಂದು ಮಗ್ಗದಲ್ಲಿ 3 ಸೀರೆ ನೇಯಿಸಲಾಗುತ್ತಿದೆ.\ ಬಂಡವಾಳಕ್ಕಾಗಿ ಸಾಲ ಮಾಡುವ ಪ‌ರಿಸ್ಥಿತಿ ಬಂದೊದಗಿದೆ.ಕೆಲವು ನೇಕಾರರು ವಾರ್ಪುಗ‌ಳನ್ನು ಹಾಕಿಸಿ ಅದ‌ನ್ನು ನೇಯಿಸಿದರೆ ಎಂದು ಅಲ್ಲಿಗೆ ನಿಲ್ಲಿಸಿದ್ದಾರೆ. ಇನ್ನು ಹಲವು ನೇಕಾರರು ರೇಷ್ಮೆ ಉದ್ಯಮದಿಂದ ಆರ್ಟ್‌ ಸಿಲ್ಕ್, ಪಾಲಿಯಸ್ಟರ್ ಸೀರೆಗಳನ್ನು ನೇಯಿಸುತ್ತಿದ್ದಾರೆ. ಇದು ನೇಕಾರರಲ್ಲಿಯೇ ಸ್ಪರ್ಧೆ ಏರ್ಪಡಲು ಕಾರಣವಾಗುತ್ತಿದೆ.

Advertisement

ಉತ್ತರ ಭಾರತದ ಮಾರುಕಟ್ಟೆಯಿಲ್ಲ: ವಿಶೇಷವಾಗಿದೊಡ xಬಳ್ಳಾಪುರದಲ್ಲಿ ನೇಯ್ದು ‌ ಕ ‌ಡಿಮೆ ತೂಕದ ನಮೂನೆಯ ರೇಷ್ಮೆ ಸೀರೆಗಳು ಉತ್ತರ ಭಾರತ ದಲ್ಲಿ ಹೆಚ್ಚು ಮಾರಾಟವಾಗುತ್ತದೆ. ಕೋವಿಡ್  ‌ಪರಿಣಾಮ ಎಲ್ಲೆಡೆ ಶುಭ ‌ ಸಮಾರಂಭಗಳಿಗೆ ಹಲವಾರು ನಿರ್ಬಂಧ ಹೇರಿರುವುದರಿಂದ ಸೀರೆಗಳನು ಕೊಳ್ಳುವವರೇ ಇಲ್ಲದಂತಾಗಿ ರೇಷ್ಮೆ ಬಟ್ಟೆ ತಯಾರಿಕೆ ಕುಸಿಯುತ್ತಿದೆ. ಇದರಿಂದಾಗಿ ಅನಿವಾರ್ಯವಾಗಿ ಸೀರೆಗಳನ್ನು ದಾಸ್ತಾನು ಮಾಡಲಾಗುತ್ತಿದೆ ಎನ್ನುತ್ತಾರೆ ರೇಷ್ಮೆ ಸೀರೆಗಳ ಉದ್ಯಮಿ ರಮೇಶ್‌.

ಅವಲಂಬಿತ ಉದ್ಯಮಗಳಿಗೆ ಹೊಡೆತ: ರೇಷ್ಮೆ ಸೀರೆಗಳ ತಯಾರಿಕ ಕುಸಿತವಾಗುತ್ತಿರುವುದರಿಂದ ನೇಕಾರಿಕೆಯನ್ನು ಅವಲಂಬಿಸಿರುವ ಹುರಿಮಿಷನ್‌, ರೇಷ್ಮೆ ಬಣ್ಣ ಮಾಡುವ ‌ ಮಾಲೀಕರು, ಹಾಗೂ ಕಾರ್ಮಿಕರಿಗೆ ರೇಷ್ಮೆ ರೀಲರ್‌ಗಳ ಕೆಲಸಕ್ಕೂ ಹೊಡೆತ ‌ ಬಿದ್ದಿದ್ದು, ಈ ಘಟಕಗಳಲ್ಲಿಯೂ ಕೆಲಸವಿಲ್ಲದಂತಾಗಿದೆ. 3 ತಿಂಗಳಿನಿಂದ ‌ ರೇಷ್ಮೆ ನೂಲು ತಯಾರಿಕೆ ನಿಂತಿದೆ ಎನ್ನುತ್ತಾರೆ ಸಾಯಿ ರೀಲರ್ಸ್ ಮಾಲೀಕ ‌ರಾದ ಮೋಹನ್‌ ಕುಮಾರ್. ರೇಷ್ಮೆ ನಗರ ಎಂದು ಇಡೀ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದ್ದ ದೊಡ್ಡಬಳ್ಳಾಪುರಕ್ಕೆ ಸ್ವಾಗತ ನೀಡುವ ಕಮಾನುಗಳು ಮುಂದೆ ಅರ್ಥ ಕಳೆದುಕೊಂಡರೂ ಅಚ್ಚರಿಯಿಲ್ಲ.

ಸರ್ಕಾರ ಆವರ್ತನಿ ಸ್ಥಾಪಿಸಿ, ರೇಷ್ಮೆ ಬೆಲೆ ಸ್ಥಿರವಾಗಿರುವಂತೆಕ್ರಮ ಕೈಗೊಳ್ಳಬೇಕಿದೆ. ಮದುವೆ ಮೊದಲಾದಸಭೆ ಸಮಾರಂಭಗಳಿಗೆ ಇರುವ ನಿಯಮ ಸಡಿಲಗೊಳಿಸಿ ರೇಷ್ಮೆ ಸೀರೆಗಳಮಾರಾಟಕ್ಕೆ ಅನುಕೂಲ ಮಾಡಿಕೊಟ್ಟರೆ ರೇಷ್ಮೆ ಉದ್ಯಮ ಚೇತರಿಸಿಕೊಳ್ಳುತ್ತದೆ. ಪಿ.ಸಿ.ವೆಂಕಟೇಶ್‌, ಅಧ್ಯಕ್ಷರು, ಬೆ. ಗ್ರಾಮಾಂತರ ಹಾಗೂ ನಗರ ಜಿಲ್ಲಾ ನೇಕಾರರ ಉತ್ಪಾದನಾ, ಮಾರಾಟ ಸಹಕಾರ ಮಂಡಳಿ

 

ಡಿ.ಶ್ರೀಕಾಂತ

Advertisement

Udayavani is now on Telegram. Click here to join our channel and stay updated with the latest news.

Next