Advertisement

ಯಾದಗಿರಿ ಜಿಲ್ಲಾಡಳಿತ ಭವನಕ್ಕೂ ಕಾಲಿಟ್ಟಿತೆ ಕೋವಿಡ್-19 ಸೋಂಕು?

07:43 PM Jul 10, 2020 | keerthan |

ಯಾದಗಿರಿ: ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೋವಿಡ್-19 ಸೋಂಕು ಇದೀಗ ಜಿಲ್ಲಾಡಳಿತ ಭವನಕ್ಕೂ ಕಾಲಿಟ್ಟಿರುವ ಅನುಮಾನ ಮೂಡಿದೆ.

Advertisement

ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಮೂರನೇ ಹಂತಕ್ಕೆ ತಲುಪಿದ್ದು, ಜಿಲ್ಲಾಡಳಿತದ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಜು.3ರಂದು ಕೋವಿಡ್ ಪರೀಕ್ಷೆಗೆ ಗಂಟಲು ದ್ರವ ಮಾದರಿಯನ್ನು ನೀಡಿದ್ದರು. ಇವರಲ್ಲಿ ಕೆಲವರಿಗೆ ಸೋಂಕು ದೃಢವಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ.

ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂರ ಪ್ರಕಟಣೆ ಹೊರಡಿಸಿದ್ದು ಆಡಳಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಹಾಗಾಗಿ ಒಂದು ದಿನದ ಮಟ್ಟಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next