Advertisement

ಕೋವಿಡ್-19 ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಬಲಿ

10:30 AM Jun 29, 2020 | keerthan |

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19 ಮರಣ ಮೃದಂಗ ಮುಂದುವರೆದಿದೆ. ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಸೋಂಕಿನಿಂದ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದು, ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಆರನೆ ಬಲಿಯಾಗಿದೆ.

Advertisement

ಸಮುದಾಯ ಆರೋಗ್ಯ ಕೇಂದ್ರದ (ಸರಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ 59 ವರ್ಷದ ವ್ಯಕ್ತಿ (ಪಿ.11211) ಚಿಕಿತ್ಸೆ ಫಲಿಸದೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ. ಜೂನ್ 27ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಸೋಮವಾರ ಬೆಳಗ್ಗೆ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಬಾಗಲಕೋಟೆ ಡಿ ಹೆಚ್ ಒ ಡಾ.ಅನಂತ ದೇಸಾಯಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ ಆರು ಜನ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next