Advertisement

Covid ಅಕ್ರಮ ವರದಿ: ಬಿಜೆಪಿಗೆ ಮತ್ತೊಂದು ಸಂಕಷ್ಟ?

11:50 PM Aug 31, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಕಾಲಾ ವಧಿಯಲ್ಲಿ ಕೋವಿಡ್‌-19 ನಿಯಂತ್ರಣ ಸಾಮಗ್ರಿ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ನೇಮಕ ಮಾಡಿದ್ದ ಏಕ ಸದಸ್ಯ ಆಯೋಗ ತನ್ನ ಮಧ್ಯಾಂತರ ವರದಿಯನ್ನು ಶನಿವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುವ ಸಾಧ್ಯತೆ ಇದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ನ್ಯಾ| ಜಾನ್‌ ಮೈಕಲ್‌ ಕುನ್ಹಾ ಅವರು
ಮುಚ್ಚಿದ ಪೆಟ್ಟಿಗೆಯಲ್ಲಿ 1,722 ಪುಟಗಳ ವರದಿಯನ್ನು ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯಮಂತ್ರಿ ಯವರ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ರಾಜಕೀಯ ಕಾರ್ಯ ದರ್ಶಿಗಳಾದ ಗೋವಿಂದರಾಜ್‌, ನಸೀರ್‌ ಅಹ್ಮದ್‌ ಜತೆಗಿದ್ದರು. ವರದಿಯ ಸಾರ ಸೋರಿಕೆಯಾಗದಂತೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ವರದಿ ಸಲ್ಲಿಕೆಯಾಗುತ್ತಿದ್ದಂತೆ ತಮ್ಮ ಕೊಠಡಿಯಲ್ಲಿ ಇರಿಸುವಂತೆ ಸೂಚನೆ ನೀಡಿದ್ದಾರೆ. ವರದಿ ಸಲ್ಲಿಕೆ ಯಾಗುವ ಸಂದರ್ಭದಲ್ಲಿ ಕೆಲವು ಸಚಿವರಿಗೂ ಒಳಗೆ ಪ್ರವೇಶ ಅವಕಾಶ ಕಲ್ಪಿಸಿರಲಿಲ್ಲ ಎಂದು ಗೊತ್ತಾಗಿದೆ.

ಈ ವರದಿ ಬಹಿರಂಗಗೊಂಡರೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್‌ ನಾಯಕರ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಂದಿನ ಎರಡು ದಿನಗಳ ಕಾಲ ವರದಿಯ ಬಗ್ಗೆ ಸುದೀರ್ಘ‌ ಅಧ್ಯಯನ ನಡೆಸ ಲಿದ್ದಾರೆ. ಆ ಬಳಿಕ ಸೆ. 5ರಂದು ನಡೆ ಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡಿಸುವ ಸಾಧ್ಯತೆಗಳು ದಟ್ಟವಾಗಿದ್ದು, ವರದಿಯ ಆಧಾರದ ಮೇಲೆ ಆದಷ್ಟು ಬೇಗ ಶಿಸ್ತುಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಯೋಗ ಸ್ಥಾಪನೆ ಯಾವಾಗ?
2023ರ ಆ. 26ರಂದು ರಾಜ್ಯ ಸರಕಾರವು ನ್ಯಾ| ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ಕೋವಿಡ್‌ ಸಂದರ್ಭದಲ್ಲಿ ನಡೆದ ಅವ್ಯವಹಾರಗಳ ತನಿಖೆ ಏಕ ಸದಸ್ಯ ತನಿಖಾ ಆಯೋಗ ವನ್ನು ನೇಮಿಸಿತ್ತು. ಮೂರು ತಿಂಗಳೊಳಗಾಗಿ ವರದಿ ನೀಡು ವಂತೆ ಆಯೋಗಕ್ಕೆ ಗಡುವು ನೀಡಲಾಗಿತ್ತು. ಕುಮಾರಕೃಪಾ ಅತಿಥಿ ಗೃಹದಲ್ಲಿ ಆಯೋಗಕ್ಕೆ ಕಚೇರಿ ಹಾಗೂ ಸಿಬಂದಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next