Advertisement

ಪುತ್ತೂರು: ಮದ್ಯ ಸೇವಿಸಿ ಮಲಗಿದ್ದ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಿದ ಅಧಿಕಾರಿಗಳು

04:51 PM May 12, 2021 | Team Udayavani |

ಪುತ್ತೂರು: ರಸ್ತೆ ಬದಿಯ ಬಿಕ್ಷುಕರೊಂದಿಗೆ ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಂಕಿತನನ್ನು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

Advertisement

ಗದಗ ಜಿಲ್ಲೆಯಿಂದ ಪುತ್ತೂರಿಗೆ ಬಂದಿದ್ದ ವ್ಯಕ್ತಿ, ನಗರದ ಮಹಾಮಾಯಿ ದೇವಳ ರಸ್ತೆಯಲ್ಲಿ ಇನ್ನಿತರ ಕೆಲವು ಉ.ಕರ್ನಾಟಕ ಮೂಲದ ವ್ಯಕ್ತಿಗಳೊಂದಿಗೆ ಕಾಲ ಕಳೆಯುತ್ತಿದ್ದ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾದ ಈತ ನೇರವಾಗಿ ಸರಕಾರಿ ಆಸ್ಪತ್ರೆಗೆ ಬಂದು ಕೋವಿಡ್ ತಪಾಸಣೆ ಮಾಡಿಕೊಂಡಿದ್ದ ಆಗ ಕೋವಿಡ್ ಸೋಂಕು ದೃಢವಾಗಿದೆ. ಸೋಂಕು ತಗುಲಿರುವುದು ಗೊತ್ತಾಗುತ್ತಲೇ ಮೇ 11ರ ರಾತ್ರಿ ಆತ ಹಠಾತ್ ನಾಪತ್ತೆಯಾದ ಎನ್ನಲಾಗಿದೆ.

ಇದನ್ನೂ ಓದಿ :ತೌಕ್ತೇ ಚಂಡಮಾರುತ ಆತಂಕ: ಮೀನುಗಾರಿಕೆಗೆ ತೆರಳಿರುವ ಮೀನುಗಾರರಿಗೆ ಮರಳಲು ಸೂಚನೆ

ಈ ಬಗ್ಗೆ ಸರಕಾರಿ ಆಸ್ಪತ್ರೆಯಿಂದ ಪುತ್ತೂರು ನಗರಸಭೆಗೆ ಮಾಹಿತಿ ನೀಡಲಾಗಿತ್ತು. ಆದರೆ ಆತ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಮೇ 12ರಂದು ಮಧ್ಯಾಹ್ನ ನಗರಸಭಾ ಆರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್ ಮತ್ತು ಸಿಬ್ಬಂದಿಗಳು ಇಲ್ಲಿನ ನೆಲ್ಲಿಕಟ್ಟೆ ಶಾಲೆಯಲ್ಲಿ ತೆರೆಯಲಾದ ಪಾಲನಾ ಕೇಂದ್ರದಲ್ಲಿ ವಾಸ್ತವ್ಯ ಹೊಂದಿರುವ ಲಾಕ್‌ಡೌನ್ ಸಂತ್ರಸ್ತರಿಗೆ ಮಧ್ಯಾಹ್ನದ ಆಹಾರ ನೀಡಲು ಹೋಗಿದ್ದಾಗ, ನಾಪತ್ತೆಯಾದ ವ್ಯಕ್ತಿ ಮದ್ಯ ಸೇವಿಸಿ ಮಲಗಿರುವುದು ಪತ್ತೆಯಾಗಿದೆ.

ತಕ್ಷಣ ಜಾಗೃತರಾದ ಅಧಿಕಾರಿಗಳು ಆತನನ್ನು ಮರಳಿ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗಾಗಿ ಯತ್ನಿಸಿದರು. ಸಾಕಷ್ಟು ಹೊತ್ತಾದ ಬಳಿಕ ಅಂಬ್ಯುಲೆನ್ಸ್ ಸಿಕ್ಕಿದ್ದು, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಅವರ ಸೂಚನೆಯ ಮೇರೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಯಿತಾದರೂ ಆತನಿಗೆ ವಿಪರೀತ ಜ್ವರ ಇರುವ ಹಿನ್ನೆಲೆಯಲ್ಲಿ ಆತನನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ ಎಂದು ತಿಳಿದು ಬಂದಿದೆ.

Advertisement

ಮದ್ಯ ಸೇವಿಸಿ ಮಲಗಿದ್ದೆ:

ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ವರದಿಯಿಂದ ಹೆದರಿಕೆಯಾಯಿತು. ಹಾಗಾಗಿ ನನ್ನಲ್ಲಿದ್ದ ಎರಡು ಕ್ವಾಟರ್ ಮದ್ಯ ಬಾಟಲಿಗಳನ್ನು ಅಲ್ಲಿ ಸೇವಿಸಲು ಆಗುವುದಿಲ್ಲ ಎಂದು ಆಸ್ಪತ್ರೆಯಿಂದ ಪಲಾಯನ ಮಾಡಿ ಚಿಣ್ಣರ ಪಾರ್ಕ್‌ನಲ್ಲಿ ರಾತ್ರಿ ಮದ್ಯ ಸೇವಿಸಿ ಅಲ್ಲಿಂದ ಬೆಳಿಗ್ಗೆ ನೆಲ್ಲಿಕಟ್ಟೆ ಪಾಲನ ಕೇಂದ್ರಕ್ಕೆ ಬಂದು ಮಲಗಿದ್ದೆ ಎಂದು ಆತ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಆದರೆ ನನ್ನನ್ನು ಕೊವಿಡ್ ಕೇರ್ ಸೆಂಟರ್‌ಗೆ ದಾಖಲಿಸಿದರೆ ಅಲ್ಲಿಂದಲೂ ನಾನು ಓಡಿ ಹೋಗುವೆ ಎಂದು ಆತ ನಗರಸಭಾ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದ್ದಾನೆ ಎಂದೂ ತಿಳಿದು ಬಂದಿದೆ. ಪಾಸಿಟಿವ್ ಎಂದು ಗೊತ್ತಾದ ಮೇಲೂ ಆತ ಎರ್ರಾಬಿರ್ರಿ ಸುತ್ತಾಡಿದ್ದು, ಈ ಸಂದರ್ಭದಲ್ಲಿ ಆತನ ಪ್ರಾಥಮಿಕ ಸಂಪರ್ಕಕ್ಕೆ ಯಾರೆಲ್ಲ ಬಂದಿದ್ದಾರೆ ಎಂಬ ಬಗ್ಗೆ ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತಿದೆ

Advertisement

Udayavani is now on Telegram. Click here to join our channel and stay updated with the latest news.

Next