Advertisement

ದೇವೇಗೌಡರಿಗೆ ಕೋವಿಡ್ ಸೋಂಕು ; ಗುಣಮುಖರಾಗಲಿ ಎಂದು ಹಾರೈಸಿದ ರಾಜಕೀಯ ಗಣ್ಯರು

02:38 PM Mar 31, 2021 | Team Udayavani |

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಬೇಗ ಗುಣಮುಖರಾಗಲಿ ಎಂದು ರಾಜಕೀಯ ಗಣ್ಯರು ಹಾರೈಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.

Advertisement

ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ ಎಂದಿದ್ದಾರೆ.

ಸಿದ್ದರಾಮಯ್ಯ ಹಾರೈಸಿದ್ದು, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಅವರ ಪತ್ನಿ ಚನ್ನಮ್ಮನವರಿಗೆ ಕೋವಿಡ್ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಇಬ್ಬರೂ ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಅಬಕಾರಿ ಸಚಿವ ಗೋಪಾಲಯ್ಯ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್ ಡಿ ದೇವೇಗೌಡರು ಹಾಗೂ ಅವರ ಪತ್ನಿ ಶ್ರೀಮತಿ ಚೆನ್ನಮ್ಮನವರಿಗೆ  ಕೊರೋನಾ ಸೋಂಕು ತಗುಲಿರುವುದನ್ನ  ಕೇಳಿ  ಆಘಾತವಾಗಿದೆ. ಶೀಘ್ರವೇ  ಗುಣಮುಖರಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದಿದ್ದಾರೆ.  ಇಷ್ಟೆ ಅಲ್ಲದೆ  ಡಿಕೆ ಶಿವಕುಮಾರ್, ಶಶಿಕಲಾ ಜೊಲ್ಲೆ ಸೇರಿದಂತೆ ಹಲವರು  ಟ್ವೀಟ್  ಮಾಡಿದ್ದು, ದೇವೇಗೌಡರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಶುಭ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next