Advertisement

ಕೋವಿಡ್ ಸೋಂಕು; ರಾಜ್ಯವ್ಯಾಪಿ ಶಾಲೆ ಬಂದ್ ಇಲ್ಲ: ಶಿಕ್ಷಣ ಸಚಿವ ನಾಗೇಶ್

11:44 AM Jan 11, 2022 | Team Udayavani |

ಬೆಂಗಳೂರು: ಶಾಲೆಗಳಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Advertisement

ಇದನ್ನೂ ಓದಿ:ಸಿಎಂ ಬೊಮ್ಮಾಯಿ ಪುತ್ರ ಮತ್ತು ಸೊಸೆಗೂ ಕೋವಿಡ್ ಪಾಸಿಟಿವ್

ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿದೆ. ಹೀಗಾಗಿ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೋವಿಡ್ ಹಬ್ಬುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದರು.

ಯಾವುದಾದರೂ ಶಾಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡರೆ ಆ ಶಾಲೆಯನ್ನು ತಾತ್ಕಾಲಿಕವಾಗಿ ನಾಲ್ಕು ದಿನ ಮುಚ್ಚಬಹುದು. ಆದರೆ ಇಡಿ ರಾಜ್ಯದಲ್ಲಿ ಶಾಲಾ ತರಗತಿ ಬಂದ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸುಕರಿದ್ದಾರೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next