Advertisement

ಶವ ಹಸ್ತಾಂತರಿಸುವಾಗ ಅದಲು-ಬದಲು!

09:38 PM May 07, 2021 | Team Udayavani |

ಚಿತ್ರದುರ್ಗ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸುವಾಗ ಅದಲು-ಬದಲಾದ ಘಟನೆ ನಡೆದಿದೆ.

Advertisement

ಚಿತ್ರದುರ್ಗ ನಗರದ 60 ವರ್ಷದ ವೃದ್ಧ ಹಾಗೂ ಹಿರಿಯೂರು ತಾಲೂಕಿನ 35 ವರ್ಷದ ಯುವಕ ಕೋವಿಡ್‌ ದೃಢಪಟ್ಟಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ವೇಳೆ ಕುಟುಂಬದವರಿಗೆ ಮೃತದೇಹಗಳನ್ನು ನೀಡುವಾಗ ಯುವಕನ ಮೃತ ದೇಹದ ಬದಲು ವೃದ್ಧನ ಮೃತ ದೇಹ ನೀಡಲಾಗಿತ್ತು.ಆಸ್ಪತ್ರೆ ಸಿಬ್ಬಂದಿ ಮಾಡಿದ್ದ ಈ ಎಡವಟ್ಟಿನಿಂದಾಗಿ ವೃದ್ಧನ ಶವವನ್ನೇ ಹಿರಿಯೂರಿಗೆ ಕೊಂಡೊಯ್ಯಲಾಗಿತ್ತು.

ಅಂತ್ಯಸಂಸ್ಕಾರದ ಕೊನೆ ಕ್ಷಣದಲ್ಲಿ ಮುಖ ನೋಡಲು ಮುಂದಾದ ವೇಳೆ ಶವ ಬದಲಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಶವದೊಂದಿಗೆ ಆಸ್ಪತ್ರೆಗೆ ಬಂದ ಕುಟುಂಬದವರು, ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ವಾತಾವರಣ ತಿಳಿಗೊಳಿಸಿದ್ದಾರೆ.

ಆನಂತರ ಯುವಕನ ಶವವನ್ನು ಕುಟುಂಬಸ್ಥರಿಗೆ ಆಂಬ್ಯುಲೆನ್ಸ್‌ ಮೂಲಕ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next