Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಎಸ್ಐ, ಸೆಸ್ಕ್ ಮತ್ತು ನೋಡೆಲ್ ಅಧಿಕಾರಿಗಳು ಸೇರಿದಂತೆ ರಚಿಸಿರುವ ಮೂವರು ಅಧಿಕಾರಿಗಳ ತಂಡವು ಕೋವಿಡ್ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.
Related Articles
Advertisement
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್, ನೊಡೆಲ್ ಅಧಿಕಾರಿಗಳಾದ ಡಾ. ರವಿ, ಡಾ. ಸೀತಾಲಕ್ಷ್ಮೀ, ಡಾ. ಜಗದೀಶ್, ರೂಪಶ್ರೀ, ಸೆಸ್ಕ್ ಎಂಜಿ ನಿಯರುಗಳು ಹಾಗೂ ಪೊಲೀಸ್ ಸಹಾಯಕ ವೃತ್ತ ನೀರೀಕ್ಷಕರು ಇದ್ದರು.
ಹೆಚ್ಚು ಹಣ ಪಡೆದಿದ್ದರೆರೋಗಿಗಳಿಗೆ ವಾಪಸ್ ಕೊಡಿಸಿ: ಜಿಲ್ಲಾಧಿಕಾರಿ : ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯಬೇಕು. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್ ಕೊಡಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ಬಗೆಯ ಹಾಸಿಗೆ ಪಟ್ಟಿಯನ್ನು ಪ್ರತಿದಿನ ಆಸ್ಪತ್ರೆಯ ಮುಂಭಾಗ ಪ್ರಕಟಿಸಬೇಕು. ಕೋವಿಡ್- 19 ತಗುಲಿ ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಎಸ್ 3 ಪೋರ್ಟಲ್ನಲ್ಲಿ ದಾಖಲಿಸುವುದನ್ನು ಗಮನಿಸಬೇಕು ಎಂದು ಸೂಚನೆ ನೀಡಿದರು.