Advertisement

“ಜಿಲ್ಲಾಡಳಿತ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಬೇಕು’

12:55 PM Jun 13, 2021 | Team Udayavani |

ಔರಂಗಾಬಾದ್‌,: ಕೊರೊನಾದ ಎರಡನೇ ಅಲೆಯಿಂದ ಜಿಲ್ಲೆಯಲ್ಲಿ ನಿರ್ಮಾಣವಾದ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ಜಿಲ್ಲಾಡಳಿತವು ಮೂರನೇ ಅಲೆಯನ್ನು ತಡೆಯುವ ಕುರಿತಂತೆ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸುಭಾಷ್‌ ದೇಸಾಯಿ ಹೇಳಿದರು.

Advertisement

ಜಿಲ್ಲೆಯ ಕೊರೊನಾ ಪರಿಸ್ಥಿತಿಯ ಬಗ್ಗೆ ಜಿಲ್ಲಾಡಳಿತ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಸಚಿವ ಸುಭಾಷ್‌ ದೇಸಾಯಿ ಪರಿಶೀಲಿಸಿ ಮಾತನಾಡಿದ ಅವರು, ಕೊರೊನಾದ 3ನೇ ಅಲೆಯ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ನೀಡಿಕೆ, ಲಭ್ಯವಿರುವ ಹಾಸಿಗೆ, ಆಮ್ಲಜನಕ ಪೂರೈಕೆ, ತಜ್ಞ ವೈದ್ಯರು ಮತ್ತು ದಾದಿಯರು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಜ್ಜುಗೊಳಿಸಬೇಕು ಎಂದರು.

ಬ್ರೇಕ್‌ ದಿ ಚೈನ್‌ ಯೋಜನೆಯನ್ನು ಅನುಸರಿಸುವ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಆಡಳಿತ ಕಾಳಜಿ ವಹಿಸಬೇಕು. ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ತಜ್ಞ ವೈದ್ಯರು ಸುಸಜ್ಜಿತರಾಗಿರಬೇಕು. ಸರಕಾರದ ವಿವಿಧ ಯೋಜನೆಗಳನ್ನು ಪಡೆಯಲು ನಾಗರಿಕರು ಲಸಿಕಾ ಪ್ರಮಾಣಪತ್ರ ಹೊಂದಿರಬೇಕು ಎಂದು ನಿಯಮ ರೂಪಿಸಿದರೆ, ಲಸಿಕೆ ಪಡೆಯುವವರ ಪ್ರಮಾಣ ಹೆಚ್ಚಾಗುತ್ತದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದವರು ಹೇಳಿದರು.

ಕೊರೊನಾ ಸೋಂಕಿನ 2ನೇ ಅಲೆಯ ಪ್ರಭಾವ ಕಡಿಮೆಯಾಗಿದ್ದರೂ, ಕೊರೊನಾ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಬೇÅಕ್‌ ದಿ ಚೈನ್‌ ಅಭಿಯಾನದ ಅಡಿಯಲ್ಲಿ ನಿಯಮಗಳನ್ನು ಸಡಿಲಗೊಳಿಸಲಾಗಿರುವುದರಿಂದ ಎಲ್ಲ ಸಂಬಂ ಧಿತ ಸರಕಾರಿ ಸಂಸ್ಥೆಗಳ ಮುಖ್ಯಸ್ಥರು ಮೂರನೇ ಅಲೆಯನ್ನು ಎದುರಿಸಲು ಹೆಚ್ಚು ಜಾಗರೂಕರಾಗಿ ಕೆಲಸ ಮಾಡುವಂತೆ ನಿರ್ದೇಶಿಸಿದ್ದಾರೆ.

ಮಕ್ಕಳಿಗೆ ಪ್ರತ್ಯೇಕ ವೆಂಟಿಲೇಟರ್‌ಗಳನ್ನು ಒದಗಿಸಬೇಕು ಮತ್ತು ವ್ಯಾಕ್ಸಿನೇಶನ್‌ ಅಭಿಯಾನಗಳನ್ನು ನಡೆಸಬೇಕು. ಇದರಿಂದ ಭವಿಷ್ಯದಲ್ಲಿ ಆರೋಗ್ಯ ಇಲಾಖೆಯ ಮೇಲಿನ ಒತ್ತಡ ಖಂಡಿತವಾಗಿ ಕಡಿಮೆಯಾಗುತ್ತದೆ. ಆದ್ದರಿಂದ ಎಲ್ಲ ಸರಕಾರಿ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

Advertisement

ಸಂಸದ ಇಮಿ¤ಯಾಜ್‌ ಜಲೀಲ್‌ ಮಾತನಾಡಿ, ಜಿಲ್ಲೆಯ ದಂತವೈದ್ಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಇದರಿಂದ ಕಪ್ಪು ಶೀಲೀಂಧ್ರ ರೋಗಿಗಳಿಗೆ ಚಿಕಿತ್ಸೆ ಸಮಯಕ್ಕೆ ಲಭ್ಯವಾಗುತ್ತದೆ. ರೋಗಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಮಕ್ಕಳ ಕೊರೊನಾ ತಡೆಗಟ್ಟುವಿಕೆಗೆ ಮುನ್ನೆಚ್ಚರಿಕೆ ಕ್ರಮವಾಗಿ ವೆಂಟಿಲೇಟರ್‌ಗಳ ಬಳಕೆಯಲ್ಲಿ ತರಬೇತಿ ಪಡೆದ ವೈದ್ಯರ ತಂಡವನ್ನು ಸಜ್ಜುಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪರಿಷತ್‌ ಅಧ್ಯಕ್ಷೆ ಮೀನಾ ತಾಯಿ ಶೆಲ್ಕೆ, ಸಂಸದ ಡಾ|ಭಗತವ್‌ ಕರಾಡ್‌, ಶಾಸಕ ಹರಿಭಾವು ಬಾಗ್ಡೆ, ಜಿಲ್ಲಾಧಿಕಾರಿ ಸುನೀಲ್‌ ಚವಾಣ್‌ , ಹೆಚ್ಚುವರಿ ಜಿಲ್ಲಾಧಿಕಾರಿ ಡಾ|ಅನಂತ್‌ ಗವಾನೆ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಬಿ.ಬಿ.ನೆಮನೆ, ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next