Advertisement

ಸೋಂಕು ಏರಿಕೆಯಾಗದಂತೆ ಕ್ರಮವಹಿಸಿ

03:32 PM Jun 15, 2021 | Team Udayavani |

ಬೆಂಗಳೂರು: ನಗರದಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಜಾರಿಗೊಳಿಸಿದ್ದು, ಕೋವಿಡ್‌-19 ಸೋಂಕು ನಿಯಂತ್ರಿಸಲು ಪಾಲಿಕೆಯ ಎಲ್ಲ ಜಂಟಿ ಆಯುಕ್ತರು,ಆರೋಗ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯಆಯುಕ್ತರು ಗೌರವ್‌ ಗುಪ್ತ ಸೂಚಿಸಿದ್ದಾರೆ.

Advertisement

ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿರುವ ಅವರು, ಲಾಕ್‌ಡೌನ್‌ ತೆರವಿನಲ್ಲಿಹಲವು ಅಗತ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ಕೂಲಿ ಕಾರ್ಮಿಕರು ಸೇರಿದಂತೆಸಾವಿರಾರು ಜನರು ನಗರಕ್ಕೆ ಹಿಂದಿರುಗುತ್ತಿದ್ದಾರೆ.ಎಲ್ಲರಿಗೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು.

ಈಹಿನ್ನೆಲೆಯಲ್ಲಿ ಕೋವಿಡ್‌-19 ಪರೀಕ್ಷೆಯನ್ನು ತೀವ್ರಗೊಳಿಸಬೇಕು ಮತ್ತುಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಶಿಬಿರಗಳನ್ನು ಆಯೋಜಿಸಬೇಕು. 24ಗಂಟೆಯೊಳಗೆ ಪರೀಕ್ಷೆ ವರದಿ ಪಡೆಯಬೇಕು ಎಂದು ಆರೋಗ್ಯಾಧಿಕಾರಿಗಳಿಗೆತಾಕೀತು ಮಾಡಿದ್ದಾರೆ.

ಈ ಸಂಬಂಧ ಕೋವಿಡ್‌-19 ಸೋಂಕುಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ವಲಯ, ಪ್ರಾಥಮಿಕಆರೋಗ್ಯ ಕೇಂದ್ರ ವಾರ್ಡ್‌ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಆಯಾ ವಲಯಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸಬೇಕು. ಈಸಂಬಂಧ ಕೂಡಲೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದು ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next