Advertisement

ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ

01:35 PM Jun 12, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ. ನಮ್ಮ ರಾಜ್ಯವನ್ನು ಬಿಹಾರಕ್ಕೆಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡೋದು ಸರಿಯಲ್ಲಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೇ ಮಾಹಿತಿ ನಾವು ಮುಚ್ಚಿಟ್ಟಿಲ್ಲ. ಅಂತಹ ಅವಕಾಶವೇ ಇಲ್ಲ ಎಂದರು.ರಾಜ್ಯದಲ್ಲಿ ಅನ್‌ಲಾಕ್‌ ಮಾಡಿದರೂ ಜನರುಎಚ್ಚರಿಕೆಯಿಂದ ಇರಬೇಕು. 2ಡೋಸ್‌ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು.

ರಾಜ್ಯದಲ್ಲಿ ಕನಿಷ್ಠಶೇ 70 ರಷ್ಟು ಜನರಿಗೆ 2 ಡೋಸ್‌ ಕಂಪ್ಲೀಟ್‌ ಆದ ಮೇಲೆ ಮೊದಲಿನಂತೆ ಆರಾಮ ಆಗಬಹುದು. ಲಸಿಕೆ ಹಾಕಿಸಿಕೊಳ್ಳುವವರೆಗೂ ಯಾರೂ ಮೈ ಮರೆಯಬಾರದು.ರಾಜ್ಯದಲ್ಲಿ ಆರ್ಥಿಕ ನಷ್ಟ ಆಗಿದೆ. ಹೀಗಾಗಿ ಕೆಲ ವಿನಾಯಿತಿ ಕೊಡಲಾಗಿದೆ. ಅಳೆದುತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾ ಯ್ತಿಯಿಂದ ಸೋಂಕುಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next