Advertisement

ಬಂಟ್ವಾಳ : ಕೋವಿಡ್ ಸೋಂಕು ಇದ್ದರೂ ಮದುವೆಯಲ್ಲಿ ಭಾಗಿ : ಪ್ರಕರಣ ದಾಖಲು

07:48 AM May 14, 2021 | Team Udayavani |

ಬಂಟ್ವಾಳ: ಕೋವಿಡ್ ಸೋಂಕು ದೃಢಪಟ್ಟರೂ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಮಣಿನಾಲ್ಕೂರು ಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ. ಅವರಿಗೆ ಮೇ 10ರಂದು ಸೋಂಕು ದೃಢಪಟ್ಟಿದ್ದು, ಆದರೆ ಅವರು ಗುರುವಾರ ಕಾರ್ಕಳದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು.

ಗ್ರಾ.ಪಂ.ಪಿಡಿಒ ಅವರ ತಂಡ ಮನೆಗೆ ಭೇಟಿಯಾದಾಗ ಅವರು ಮನೆಯಲ್ಲಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಿಡಿಒ ವಸಂತಿ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next