Advertisement

ಕೋವಿಡ್ ಸೋಂಕಿಗೆ ಕೊಡಗು ಜಿಲ್ಲೆಯಲ್ಲಿ ವೃದ್ಧ ಸಾವು: ಸಾವಿನ ಸಂಖ್ಯೆ 22ಕ್ಕೆ ಏರಿಕೆ

04:12 PM Sep 05, 2020 | sudhir |

ಮಡಿಕೇರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ವೃದ್ಧ ಸಾವನ್ನಪ್ಪಿದ್ದಾರೆ, ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

Advertisement

ಸೋಮವಾರಪೇಟೆ ತಾಲೂಕು ಕುಸುಬೂರು ನಿವಾಸಿ 70 ವರ್ಷದ ವೃದ್ಧರೊಬ್ಬರು ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಳಗಾಗಿದ್ದರು. ಆದರೆ ಜ್ವರ ಕಡಿಮೆಯಾಗದ ಕಾರಣ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದು. ವ್ಯಕ್ತಿಗೆ ತುಂಬಾ ಸುಸ್ತು ಇದ್ದ ಕಾರಣ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು ಸಲಹೆ ನೀಡಿರುತ್ತಾರೆ.

ಅದರಂತೆ ಆಗಸ್ಟ್  30ರಂದು ಅವರು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರೆ ಈ ವರದಿಯಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಅವರ ದೇಹದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಇದ್ದ ಕಾರಣ ಕೂಡಲೇ ಐ.ಸಿ.ಯು.ನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಿದ್ದಾರೆ, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next