Advertisement

ಭಯ ಹುಟ್ಟಿಸಿದ ಸೋಂಕಿತರ ಓಡಾಟ

09:14 PM May 15, 2021 | Team Udayavani |

ತಾವರಗೇರಾ: ಸಮೀಪದ ಜುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಕೊರೊನಾ ಸೋಂಕಿತರು ಗ್ರಾಮದಲ್ಲಿ ಓಡಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಭಯಭೀತಿರಾದ ಘಟನೆ ಜರುಗಿದೆ.

Advertisement

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಗ್ರಾಪಂ ಲೆಕ್ಕಸಹಾಯಕ ಮುದೇಗೌಡ ಪುಂಡಗೌಡರ, ಮನೆಯಿಂದ ಅನಾವಶ್ಯಕವಾಗಿ, ಹೊರ ಬರದೇ ಆರೋಗ್ಯ ಇಲಾಖೆಯ ಆದೇಶ ಪಾಲಿಸಬೇಕು. ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗುವುದು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಗ್ರಾಮದ ಮೂರು ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯವರು ಸೋಂಕಿತರನ್ನು ಹೋಂ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದ್ದು, ಸೋಂಕು ತಡೆಗೆ ಗ್ರಾಮದ ಎಲ್ಲ ರಸ್ತೆಗಳಿಗೂ ಸೋಂಕು ನಿವಾರಕ ದ್ರಾವಣವನ್ನು ಪಂಚಾಯಿತಿ ವತಿಯಿಂದ ಸಿಂಪಡಿಸಲಾಗುತ್ತದೆ ಎಂದು ಹೇಳಿದರು. ಕರ ವಸೂಲಿಗಾರ ಲಕ್ಷ್ಮಣ ನಾಯಕ ಹಾಗೂ ಅಂಗನವಾಡಿ ಕಾರ್ಯಕರ್ತೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next