Advertisement

ಕೋವಿಡ್ ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ!

05:00 PM May 09, 2021 | Team Udayavani |

ಮೈಸೂರು: ಕೋವಿಡ್ 19 ಸೋಂಕಿಗೆ ಹೆದರಿ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ರವಿವಾರ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಮೈಸೂರಿನ ಸಿದ್ದಾರ್ಥ್ ಲೇಔಟ್ ನಲ್ಲಿ ವಾಸವಾಗಿದ್ದ  ಶಿವನಂಜೇಗೌಡ (65 ವ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಬಿಗ್‍ಬಾಸ್ ಮಾಜಿ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ.ನೀಡಿದ ನಟ ಸುದೀಪ್

ಮೂಲತಃ  ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಗೊರವನಹಳ್ಳಿ ನಿವಾಸಿಯಾಗಿದ್ದ ಶಿವನಂಜೇ ಗೌಡಗೆ ನಾಲ್ಕು ದಿನದ ಹಿಂದೆ ಕೋವಿಡ್ ಸೋಂಕು ದೃಢವಾಗಿತ್ತು.  ಬಳಿಕ ಹೋಮ್ ಐಸೋಲೇಶನ್ ಗೆ ಒಳಗಾಗಿದ್ದರು. ಇದರಿಂದ ಭಯಭೀತನಾದ ಆತ ವರುಣಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ವರುಣಾ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮಿ. ಆರ್  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಇದನ್ನೂ ಓದಿ: ಜಗತ್ ಕಿಲಾಡಿ! ವೈದ್ಯನೆಂದು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಹಣ್ಣಿನ ವ್ಯಾಪಾರಿ!

Advertisement

Udayavani is now on Telegram. Click here to join our channel and stay updated with the latest news.

Next