Advertisement

ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ

03:53 PM Jul 21, 2020 | keerthan |

ಉಡುಪಿ: ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

Advertisement

ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಕಳೆದ 15 ದಿನಗಳ ಹಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಯುವಕ ಮೃತಪಟ್ಟಿದ್ದಾನೆ. ಆತನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆತನಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ಮತ್ತು ಉಡುಪಿ ಗಡಿ ಮುಚ್ಚಿರುವ ಕಾರಣ ಯುವಕ ಸಂಬಂಧಿಗಳಿಗೆ ಮಣಿಪಾಲಕ್ಕೆ ಬರಲು ತೊಂದರೆಯಾಗಿದ್ದು, ಮೃತ ಯುವಕನ ಅಂತ್ಯ ಸಂಸ್ಕಾರವನ್ನು ಉಡುಪಿಯಲ್ಲೇ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ: ಕೋರ್ಟ್ ಎರಡು ದಿನ ಸೀಲ್ ಡೌನ್

Advertisement

Udayavani is now on Telegram. Click here to join our channel and stay updated with the latest news.

Next