Advertisement

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ : ಉಡುಪಿಯಲ್ಲಿ ಎರಡು ಪ್ರಕರಣಗಳ ಕುರಿತೇ ಚರ್ಚೆ

11:43 PM Apr 23, 2021 | Team Udayavani |

ಉಡುಪಿ: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹಾಗೂ ನಿಷೇದಾಜ್ನೆ ಜಾರಿ ಸಂಬಂಧ ಶುಕ್ರವಾರ ಎರಡು ಪ್ರಮುಖ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೊಳಗಾದವು.

Advertisement

ಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂ ಸಿ ನೂರಾರು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು, ಈ ಪ್ರಕರಣದಲ್ಲಿ ಕರ್ತವ್ಯಲೋಪ ಮಾಡಿದ ಅಧಿಕಾರಿಗೆ ನೋಟಿಸ್‌ ನೀಡಿದ್ದೇವೆ. ಅಲ್ಲದೇ ಸಂಬಂಧಪಟ್ಟ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದರೊಂದಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಶುಕ್ರವಾರ ರಾತ್ರಿ 8. 45 ರ ಸುಮಾರಿಗೆ ಎಎಸ್‌ಪಿ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಸ್ಕ್ ಇಲ್ಲದೇ ಫೋಟೋ ಫೋಸ್‌ ಕೊಟ್ಟಿದ್ದಾರೆ ಎಂಬ ಟೀಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಈ ಸಂಬಂಧ ಕೂಡಲೇ ಜಿಲ್ಲಾಧಿಕಾರಿಯವರ ಪ್ರತಿಕ್ರಿಯೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಗುರುವಾರ ಜಿಲ್ಲಾಡಳಿತ ಬಡವರ ಅಂಗಡಿಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚಿಸಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಇಂಥ ಪ್ರಕರಣಗಳಿಂದ ಬಡವರಿಗೊಂದು ಕಾನೂನು, ಸಿರಿವಂತರಿಗೆ ಒಂದು ಕಾನೂನು ಎಂಬ ಸಂದೇಹ ಬರುತ್ತದೆ ಎಂದು ಟೀಕಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next