Advertisement

ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರಿಗೂ ಕೋವಿಡ್ ದೃಢ

05:48 PM May 08, 2021 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಂತೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರಿಗೂ ಸೋಂಕು ಆವರಿಸಿದೆ.

Advertisement

ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರತಿದಿನ ಜಿಲ್ಲೆ ಸುತ್ತುತ್ತಾ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದ ಅವರು, ನಿನ್ನೆ ನಗರದ ಮಿಮ್ಸ್ ನಲ್ಲಿ ದಾಖಲಾಗಿದ್ದ ಕೊರೊನಾ ಸೋಂಕಿತರ ವಾರ್ಡ್ ಗೆ ತೆರಳಿ ಸೋಂಕಿತರೊಂದಿಗೆ ಮಾತುಕತೆ ನಡೆಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಅವರು ಕೂಡ ಜತೆಗಿದ್ದರು. ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಸೋಂಕು ದೃಢಪಟ್ಟಿತ್ತು. ಇದರಿಂದ ಜಿಲ್ಲಾಧಿಕಾರಿ ಎಸ್.ಅಶ್ವಥಿ ಹಾಗೂ ಎಸ್ಪಿ ಡಾ.ಎಂ.ಅಶ್ವಿನಿ ಅವರು ಹೋಂ ಐಸೋಲೇಷನ್ ಆಗಿದ್ದರು.

ಇದನ್ನೂ ಓದಿ :ಸಚಿವರೇ, ಅಧಿಕಾರಿಗಳ ಮಾತು ಕೇಳಬೇಡಿ, ಆಸ್ಪತ್ರೆಗೆ ಹೋಗಿ

ಇದರಿಂದ ನಿನ್ನೆ ನಡೆದ ಕೋವಿಡ್ ನಿಯಂತ್ರಣ ಸಭೆಗೂ ಗೈರು ಹಾಜರಾಗಿದ್ದರು.

Advertisement

ಚಾಲಕನಿಗೆ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯೂ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಅದರಂತೆ ಶನಿವಾರ ವರದಿ ಬಂದಿದ್ದು, ಕೊರೊನಾ ದೃಢಪಟ್ಟಿದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next