Advertisement

ಗ್ರಾಮಗಳ ಕಡೆ ಮಕ್ಕಳ ತಜ್ಞರ ನಡೆ : ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಸಾಧ್ಯತೆ

02:05 AM Jun 17, 2021 | Team Udayavani |

ಬೆಂಗಳೂರು / ದೇವನಹಳ್ಳಿ : ಕೊರೊನಾ ಎರಡನೇ ಅಲೆಯ ಅಬ್ಬರ ಮುಗಿಯುತ್ತಾ ಬಂದಿದ್ದು, ಇಡೀ ದೇಶವೇ ನಿಟ್ಟುಸಿರು ಬಿಡುತ್ತಿದೆ. ಈ ನಡುವೆಯೇ 3ನೇ ಅಲೆಯ ಅಪಾಯದ ಬಗ್ಗೆಯೂ ತಜ್ಞರು ಎಚ್ಚರಿಕೆ ನೀಡಿದ್ದು, ಮಕ್ಕಳೇ ಹೆಚ್ಚು ಬಾಧಿತರಾಗುತ್ತಾರೆ ಎಂದಿರುವುದು ಆತಂಕಕ್ಕೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ “ಮಕ್ಕಳ ತಜ್ಞ ವೈದ್ಯರ ನಡೆ ಹಳ್ಳಿ ಕಡೆ’ ಎಂಬ ವಿನೂತನ ಯೋಜನೆ ಜಾರಿ ಮಾಡಿದೆ.

Advertisement

ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಿದರು.

ಏನಿದು ಯೋಜನೆ?
– ಹಳ್ಳಿ ಹಳ್ಳಿಗಳಲ್ಲಿ ಮಕ್ಕಳ ತಪಾಸಣೆ ಮಾಡುವುದು
– ಸಮಸ್ಯೆ ಇರುವ ಮಕ್ಕಳಿಗೆ ಚಿಕಿತ್ಸೆ
– ಅಪೌಷ್ಟಿಕತೆ ಸಮಸ್ಯೆ ಇರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್‌

ಹೇಗೆ ತಪಾಸಣೆ?
ಪ್ರತೀ ತಾಲೂಕಿನಲ್ಲಿ ಐವರು ತಜ್ಞ ವೈದ್ಯರಂತೆ 20 ತಂಡಗಳು ಕಾರ್ಯನಿರ್ವಹಿಸಲಿವೆ. ಅವರು ಹಳ್ಳಿಗಳಿಗೆ ಭೇಟಿ ನೀಡಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಕ್ಕಳ ಮನೆ, ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

3ನೇ ಅಲೆ ತಡೆಯಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, “ಮಕ್ಕಳ ತಜ್ಞ ವೈದ್ಯರ ನಡೆ’ ಯೋಜನೆಯನ್ನು ಎಲ್ಲ ಜಿಲ್ಲೆಗಳಲ್ಲೂ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಆರ್‌. ಅಶೋಕ್‌, ಕಂದಾಯ ಸಚಿವ

Advertisement

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದ್ದು ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯಲ್ಲೂ ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
-ಶಶಿಕಲಾ ಅಣ್ಣಾಸಾಹೇಬ್‌ ಜೊÇÉೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

Advertisement

Udayavani is now on Telegram. Click here to join our channel and stay updated with the latest news.

Next