Advertisement

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

12:52 PM Apr 16, 2021 | Team Udayavani |

ಬೆಂಗಳೂರು: ಕೋವಿಡ್-19 ಸೋಂಕಿನ ಎರಡನೇ ಅಲೆಯ ಕಾರಣದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ತಡೆಗೆ ಈಗಾಗಲೇ ಕೆಲವು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಇದರ ನಡುವೆ ಆರೋಗ್ಯ ಸಚಿವ ಡಾ|ಕೆ. ಸುಧಾಕರ್ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭವಾಗುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.

Advertisement

ಕೋವಿಡ್ ಲಸಿಕೆ ಹಾಕಿಸಿಕೊಂಡ ಮೇಲೂ ಕೆಲವರಿಗೆ ಸೋಂಕು ಬಂದಿದೆ. ಬರುವುದಿಲ್ಲವೆಂದು ನಾವು ಹೇಳಿಲ್ಲ. ಆದರೆ ಸಾವಿನ ಪ್ರಮಾಣ ಕಡಿಮೆ ಆಗಲಿದೆ. ಮುಂದೆ ಬರುವ ಮೂರನೇ ಅಲೆಯನ್ನು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸುಧಾಕರ್ ಹೇಳಿದರು.

ಸಿಎಂ ಆಧ್ಯಕತೆಯಲ್ಲಿ ಆರೋಗ್ಯ, ವೈದ್ಯಕೀಯ ಮುಖ್ಯಕಾರ್ಯದರ್ಶಿ ಜೊತೆ ಉನ್ನತ ಮಟ್ಟದ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಬೆಂಗಳೂರು ಸಂಬಂಧಿಸಿದ ಶಾಸಕರು, ಸಚಿವರ ಜೊತೆ ಭಾನುವಾರವೇ ಸಭೆ ನಡೆಯಲಿದೆ. ಎಲ್ಲರ ಸಲಹೆ ಸೂಚನೆ ಬಗ್ಗೆ ಚರ್ಚಿಸಿ ಘೋಷಣೆ ಮಾಡುತ್ತೇವೆ ಎಂದರು.

ಚಿಕಿತ್ಸೆ ಕೊಡುವುದು, ಟೆಸ್ಟಿಂಗ್ ಹೆಚ್ಚಳ, ಕಂಟೋನ್ಮೆಂಟ್ ಜೋನ್ ಹೆಚ್ಚಳ, ಹೋಮ್ ಐಸೋಲೇಷನ್ ಇರುವವರ ಮೇಲೆ ನಿಗಾ ಇಡುವ ಬಗ್ಗೆ ಚರ್ಚೆಯಾಗಿದೆ. ಅತಿ ಹೆಚ್ಚು ಹಾಸಿಗೆ ಇಡುವುದಕ್ಕೆ ಮೊದಲ ಆದ್ಯತೆ. ಮೂರರಿಂದ ಐದು ಸ್ಟಾರ್ ಹೋಟೆಲ್ ಜೊತೆ ಒಡಂಬಡಿಕೆ ಮಾಡಿಕೊಳ್ಳುವುದು. ಖಾಸಗಿ ಆಸ್ಪತ್ರೆಯಲ್ಲಿ ಕಡಿಮೆ ಅನಾರೋಗ್ಯದಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ ಶೇ. 95 ರಷ್ಟು ಸೋಂಕಿತ ಜನರಿಗೆ ಆಸ್ಪತ್ರೆ ಅವಶ್ಯಕತೆ ಇಲ್ಲ ಎಂದರು.

ಕಡಿಮೆ ಸೋಂಕಿನ ಲಕ್ಷಣ ಇರುವವರು ಆಸ್ಪತ್ರೆ, ವೈದ್ಯರ ಅವಶ್ಯಕತೆ ಇದೆ ಎನ್ನುವುದಾದರೆ ಖಾಸಗಿ ಹೋಟೆಲ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಸಾವಿರ ಹಾಸಿಗೆ ಮೀಸಲಿಡುತ್ತೇವೆ. ಖಾಸಗಿ ಮೆಡಿಕಲ್ ಕಾಲೇಜು ಎರಡು ಸಾವಿರ, ಹೆಚ್ಚುವರಿಯಾಗಿ ಎರಡುವರೆ ಸಾವಿರ ನೀಡಲು ತೀರ್ಮಾನಿಸಲಾಗಿದೆ ಎಂದರು.

Advertisement

ನಮ್ಮ ಐಎಎಸ್, ಐಪಿಎಸ್, ನೋಡಲ್ ಅಧಿಕಾರಿ, ಸ್ವಸ್ಥ ಅಧಿಕಾರಿಗಳು 24 ಗಂಟೆ ಕೆಲಸ ಮಾಡುತ್ತಾರೆ. ಬೆಂಗಳೂರಿಗೆ ಸೀಮಿತವಾಗಿ ಪ್ರತೀ ವಾರ್ಡಿಗೆ ಹೆಚ್ಚುವರಿ ಒಂದು ಆಂಬ್ಯುಲೆನ್ಸ್ ಮೀಸಲಿಡುತ್ತೇವೆ. 49 ಆಂಬ್ಯುಲೆನ್ಸ್ ಶ್ರದ್ಧಾಂಜಲಿ ಆಂಬ್ಯುಲೆನ್ಸ್ ಆಗಿ ಪರಿವರ್ತನೆ ಮಾಡುತ್ತೇವೆ. ನಾಲ್ಕು ಜನ ಅಧಿಕಾರಿಗಳು ದೊಡ್ಡ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಸುಧಾಕರ್ ವಿವರಿಸಿದರು.

ರಾಜ್ಯದಲ್ಲಿ ರೆಮಿಡಿಸೀವರ್ ಕೊರತೆಯಿಲ್ಲ. ಇದರ ಹೊರತಾಗಿ ಖರೀದಿಗೆ ಪ್ರಕ್ರಿಯೆ ಆರಂಭವಾಗಿದೆ. ಆಕ್ಸಿಜನ್ ಮುಖ್ಯವಾಗಿದ್ದು, ಸಿಎಂ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಸೂಚನೆ ನೀಡಿದ್ದಾರೆ. ಜಂಬೂ ಸಿಲಿಂಡರ್‌ಗಳನ್ನು, ಕಮರ್ಷಿಯಲ್ ಆಕ್ಸಿಜನ್ ಪಡೆಯಲು ಒಡಂಬಡಿಕೆಯಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಆಗದಂತೆ ಕ್ರಮ ವಹಿಸಿದ್ದೇವೆ. ಜಿಲ್ಲಾ ಆಸ್ಪತ್ರೆಯಲ್ಲಿ ಟೆಂಡರ್ ಕರೆದಿದ್ದು,ಆಕ್ಸಿಜನ್ ಘಟಕ ಸ್ಥಾಪನೆ ಮಾಡಲಿದ್ದೇವೆ ಎಂದರು.

ರೋಗದ ಲಕ್ಷಣ ಇದ್ದರೆ ಶೀಘ್ರವೇ ಟೆಸ್ಟ್ ಮಾಡಬೇಕು. 24 ಗಂಟೆಯೊಳಗೆ ರಿಪೋರ್ಟ್ ಬರಬೇಕು. ಈಗ ಕೆಲವೆಡೆ ಬರದಿರುವುದನ್ನು ಗಮನಿಸಿದ್ದೇನೆ. ಶೀಘ್ರವೇ ನೀಡಲು ಸೂಚಿಸುತ್ತೇನೆ ಎಂದು ಸುಧಾಕರ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next